ರಾಜ್ಯ

ಧ್ವನಿವರ್ಧಕಕ್ಕೆ ಅನುಮತಿ ನೀಡದಿದ್ದರೆ ಬೀದಿಗಿಳಿದು ಹೋರಾಟ

ಧಾರವಾಡ prajakiran.com : ಕರೋನಾ ಸಾಂಕ್ರಾಮಿಕ ರೋಗದ ಹಿನ್ನಲೆಯಲ್ಲಿ ಧಾರವಾಡ ಜಿಲ್ಲೆಯಾದ್ಯಂತ ಸಾವಿರಾರು ಶ್ಯಾಮಿಯಾನ ಹಾಗೂ ಲೈಟಿಂಗ್, ಸೌಂಡ್ ಸಿಸ್ಟಿಮ್ ದ   ಮಾಲೀಕರ ಹಾಗೂ ನೌಕರರ  ಪರಿಸ್ಥಿತಿ ಗಂಭೀರ ವಾಗಿದೆ.

ಗಣೇಶ ಚತುರ್ಥಿ ಸಂದರ್ಭದಲ್ಲಿ ಅವರ ಧ್ವನಿ ವರ್ಧಕ ಹಾಗೂ ಶ್ಯಾಮಿಯಾನಅನುಮತಿ ನೀಡದಿದ್ದರೆ ಹೇಗೆ ಎಂದು ಪ್ರಮೋದ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅವರ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ   ರಾಜ್ಯ ಸರ್ಕಾರವನ್ನು ಆಗ್ರಹಿಸಿ ಶ್ರೀ ರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

ಶ್ಯಾಮಿಯಾನ ಹಾಗೂ ಲೈಟಿಂಗ್, ಸೌಂಡ್ ಸಿಸ್ಟಿಮ್ ದವರುಗಳಿಗೆ ಉದ್ಯೋಗ ಆರಂಭಿಸಲು ತಕ್ಷಣ ಅನುಮತಿ ನೀಡಬೇಕು.

ಅದರಲ್ಲಿ ಈಗ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಿ ದ್ದರಿಂದ ಅವರುಗಳು ಜೀವನ ನಿರ್ವಹಣೆ ಮಾಡಲು ಅವಕಾಶ ಮಾಡಿಕೊಡಬೇಕು ಇಲ್ಲವಾದರೆ ಬೀದಿಗಿಳಿದು ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.   

ಶ್ರೀ ರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ನಡೆದ ಪ್ರತಿಭಟನೆ ಯಲ್ಲಿ ಸೇನೆಯ ಮುಖಂಡ ಗಂಗಾಧರ ಕುಲಕರ್ಣಿ,  ಕಾರ್ಯಕರ್ತರು, ಶ್ಯಾಮಿಯಾನದ ಅಂಗಡಿಯ ಮಾಲಿಕರು, ಕೆಲಸಗಾರರು ಭಾಗವಹಿಸಿದ್ದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *