ರಾಜ್ಯ

ದೇವರ ಮುಂದೆ ಮಗುವಿನ ಶವ ಇಟ್ಟು ಬದುಕಿಸು ಎಂದು ಗಂಟೆ ಬಾರಿಸಿದ ಅಜ್ಜಿ

ಉತ್ತರಕನ್ನಡ prajakiran.com : ಮಗುವಿನ ಗಂಟಲಲ್ಲಿ ಶೇಂಗಾ ಸಿಕ್ಕಿಹಾಕಿಕೊಂಡು ಉಸಿರುಗಟ್ಟಿ ಮೃತಪಟ್ಟಿದ್ದು, ಆತನ ಅಜ್ಜಿ ಗಣಪತಿ ದೇವಸ್ಥಾನಕ್ಕೆ ತೆರಳಿ ಮಗುವಿನ ಶವವಿಟ್ಟು , ಬದುಕಿಸುವಂತೆ ಪ್ರಾರ್ಥಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನದಲ್ಲಿ ನಡೆದಿದೆ.

ಇಲ್ಲಿನ ರಾಮನಾಥ ಆಚಾರಿ ಎಂಬುವವರ ಎರಡೂವರೆ ವರ್ಷದ ಮಗು ಸಾತ್ವಿಕ್ ಮೃತಪಟ್ಟ ಬಾಲಕ. 

ಸಾತ್ವಿಕ್ ಮನೆಯಲ್ಲಿ  ಸಂಜೆ ಶೇಂಗಾ ಬೀಜ ತಿನ್ನುತ್ತಿದ್ದಾಗ ಅಚಾನಕ್ ಆಗಿ ಗಂಟಲಲ್ಲಿ ಸಿಲುಕಿಕೊಂಡವು. 

ಉಸಿರಾಡಲು ತೊಂದರೆ ಪಡುತ್ತಿದ್ದ ಮಗು ಕಂಡು  ಮನೆಯವರು ತಕ್ಷಣ,   ಗಂಟಲಿನಿಂದ ಶೇಂಗಾ ಬೀಜಗಳನ್ನು ಹೊರ ತೆಗೆದರು.

ಆದರೂ ಉಸಿರಾಟ ಸುಧಾರಿಸದ ಕಾರಣ ಪಟ್ಟಣದ ತಾಲೂಕು ಆಸ್ಪತ್ರೆಗೆ ಕರೆದೊಯ್ಯಲಾಯಿತು.

ವೈದ್ಯರು ಗಂಟಲಲ್ಲಿದ್ದ ಮತ್ತೊಂದು ಶೇಂಗಾ ಬೀಜವನ್ನು ಹೊರತೆಗೆದರು. ಆದರೆ ಅಷ್ಟರಲ್ಲಿ ಮಗುವಿನ ಉಸಿರು ನಿಂತಿತ್ತು. ವೈದ್ಯರು ಮಗು ಮೃತಪಟ್ಟಿದೆ ಎಂದು ದೃಢಪಡಿಸಿದರು.

ಆ ನಂತರ ಮಗುವಿನ ಸಾವಿನಿಂದ ದಿಕ್ಕು ತೋಚದ ಅಜ್ಜಿ ಮೊಮ್ಮಗನ  ಶವ ಹೊತ್ತು ಸಮೀಪದ ದೇವಸ್ಥಾನಕ್ಕೆ ಮೃತದೇಹವನ್ನು ತೆಗೆದುಕೊಂಡು ಹೋಗಿ ದೇವರಮುಂದೆ ಮಗುವನ್ನಿಟ್ಟು ಬದುಕಿಸುಂತೆ ಅಂಗಲಾಚಿದ್ದಾರೆ.

ಈ ಸನ್ನಿವೇಶ ಸುತ್ತಲ ಜನರಲ್ಲಿ ಭಾವುಕ ದೃಶ್ಯ ಸೃಷ್ಟಿಸಿತು. ಜನರು ಮಗುವಿನ ಸಾವಿಗೆ ಮರುಗಿದರು. 

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *