ಗದಗ prajakiran.com : ಕಡಿಮೆ ಬೆಲೆಗೆ ಬಂಗಾರ ಕೊಡುವುದಾಗಿ ನಂಬಿಸಿ ಚೀಟಿಂಗ್ ಮಾಡಿದ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ.
ಮುಂಡರಗಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕಡಿಮೆ ಬೆಲೆಗೆ ಬಂಗಾರ ಕೊಡುವುದಾಗಿ ನಂಬಿಸಿ, ತಾಲೂಕಿನ ಬೆಣ್ಣಿಹಳ್ಳಿ ಗ್ರಾಮದ ಬಳಿ ಕರೆದು 15 ಲಕ್ಷ ಹಣ ಪಡೆದು ಬಂಗಾರ ಕೊಡದೇ ಹೋದ ಬಗ್ಗೆ ದೂರು ದಾಖಲಾಗಿದೆ.
ಈ ಚೀಟಿಂಗ್ ಪ್ರಕರಣವನ್ನು ಭೇದಿಸಿರುವ ಪೊಲೀಸರು ಆರೋಪಿತರಿಂದ 10 ಲಕ್ಷ ಹಣವನ್ನು ಜಪ್ತ ಮಾಡಿ ಆರೋಪಿಯನ್ನು ದಸ್ತಗಿರಿ ಮಾಡಿದ್ದು, ತನಿಖೆ ಮುಂದುವರೆದಿದೆ.