ಅಪರಾಧ

ಚಿನ್ನ ತೊಳೆಯುವ ನೆಪದಲ್ಲಿ ಹುಬ್ಬಳ್ಳಿಯಲ್ಲಿ ಲಕ್ಷಾಂತರ ಮೌಲ್ಯದ ಚಿನ್ನ ಲೂಟಿ….!

ಹುಬ್ಬಳ್ಳಿ prajakiran.com : ಚಿನ್ನ ತೊಳೆದು ಕೊಡುವ ನೆಪದಲ್ಲಿ ಮಹಿಳೆಯೊಬ್ಬಳನ್ನು ವಂಚನೆ ಮಾಡಿ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳ್ಳಿ-ಬಂಗಾರ ಲೂಟಿ ಮಾಡಿದ ಘಟನೆ ಹುಬ್ಬಳ್ಳಿಯ ಚೆನ್ನಪೇಟೆಯಲ್ಲಿ ನಡೆದಿದೆ.

ವಿಷ್ಣುಸಾ ಪವಾರ ಎಂಬುವವರ ಮನೆಯಲ್ಲಿ ಸರೋಜಾ ಹಾಗೂ ಸೊಸೆ ಅನಿತಾ ಎಂಬುವವರೇ ಮೋಸಕ್ಕೆ ಒಳಗಾಗಿದ್ದು, ಆರು ಬಳೆ ಮತ್ತು ಮಂಗಳಸೂತ್ರ ತೊಳೆಯುವುದಾಗಿ ಹೇಳಿದ್ದರಿಂದ ಅವರನ್ನು ನಂಬಿ ಮೋಸ ಹೋಗಿದ್ದಾರೆ

ಕುಕ್ಕರಿನಲ್ಲಿ ಬಂಗಾರ ತೊಳೆಯುವ ನೆಪ ಮಾಡಿ, ಸೊಸೆಯನ್ನ ಒಳಗಡೆ ಅತ್ತೆಯನ್ನ ಕುಕ್ಕರ್ ಮುಚ್ಚಳ ತೆಗೆಯಲು ಹೇಳಿ ಒಳಗಡೆ ಕಳುಹಿಸಿದ್ದಾರೆ.

ಮಾಜಿ ಪಾಲಿಕೆ ಸದಸ್ಯ ವಿಷ್ಣುಸಾ ಪವಾರ ಎಂಬುವವರ ಮನೆಯಲ್ಲಿಯೇ ಈ ಘಟನೆ ನಡೆದಿದ್ದು, ಇದರಿಂದಾಗಿ 19 ತೊಲೆ ಬಂಗಾರ ದೋಚುವುದು ಗೊತ್ತಾದ ತಕ್ಷಣವೇ ಮಹಿಳೆ ಬಾಗಿಲು ಹಾಕಲು ಪ್ರಯತ್ನಪಟ್ಟಿದ್ದಾರೆ. ಆದರೆ, ವಂಚಕರಿಬ್ಬರು ಪರಾರಿಯಾಗಿದ್ದಾರೆ.

ಘಟನಾ ಸ್ಥಳಕ್ಕೆ ಹಳೇಹುಬ್ಬಳ್ಳಿ ಠಾಣೆ ಇನ್ಸಪೆಕ್ಟರ್ ಶಿವಾನಂದ ಕಮತಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನಗರದ ವಿವಿಧೆಡೆ ನಾಕಾಬಂದಿ ಹಾಕಲಾಗಿದೆ.

ಹುಬ್ಬಳ್ಳಿಯಲ್ಲಿ ಹಾಡಹಗಲೇ ಖದೀಮರು ತಮ್ಮ ಕೈ ಚಳಕ ತೋರಿಸಿರುವುದು ಜನತೆಯನ್ನು ಬೆಚ್ಚುಬೀಳಿಸಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *