ಹುಬ್ಬಳ್ಳಿ prajakiran.com : ಚಿನ್ನ ತೊಳೆದು ಕೊಡುವ ನೆಪದಲ್ಲಿ ಮಹಿಳೆಯೊಬ್ಬಳನ್ನು ವಂಚನೆ ಮಾಡಿ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳ್ಳಿ-ಬಂಗಾರ ಲೂಟಿ ಮಾಡಿದ ಘಟನೆ ಹುಬ್ಬಳ್ಳಿಯ ಚೆನ್ನಪೇಟೆಯಲ್ಲಿ ನಡೆದಿದೆ.
ವಿಷ್ಣುಸಾ ಪವಾರ ಎಂಬುವವರ ಮನೆಯಲ್ಲಿ ಸರೋಜಾ ಹಾಗೂ ಸೊಸೆ ಅನಿತಾ ಎಂಬುವವರೇ ಮೋಸಕ್ಕೆ ಒಳಗಾಗಿದ್ದು, ಆರು ಬಳೆ ಮತ್ತು ಮಂಗಳಸೂತ್ರ ತೊಳೆಯುವುದಾಗಿ ಹೇಳಿದ್ದರಿಂದ ಅವರನ್ನು ನಂಬಿ ಮೋಸ ಹೋಗಿದ್ದಾರೆ
ಕುಕ್ಕರಿನಲ್ಲಿ ಬಂಗಾರ ತೊಳೆಯುವ ನೆಪ ಮಾಡಿ, ಸೊಸೆಯನ್ನ ಒಳಗಡೆ ಅತ್ತೆಯನ್ನ ಕುಕ್ಕರ್ ಮುಚ್ಚಳ ತೆಗೆಯಲು ಹೇಳಿ ಒಳಗಡೆ ಕಳುಹಿಸಿದ್ದಾರೆ.
ಮಾಜಿ ಪಾಲಿಕೆ ಸದಸ್ಯ ವಿಷ್ಣುಸಾ ಪವಾರ ಎಂಬುವವರ ಮನೆಯಲ್ಲಿಯೇ ಈ ಘಟನೆ ನಡೆದಿದ್ದು, ಇದರಿಂದಾಗಿ 19 ತೊಲೆ ಬಂಗಾರ ದೋಚುವುದು ಗೊತ್ತಾದ ತಕ್ಷಣವೇ ಮಹಿಳೆ ಬಾಗಿಲು ಹಾಕಲು ಪ್ರಯತ್ನಪಟ್ಟಿದ್ದಾರೆ. ಆದರೆ, ವಂಚಕರಿಬ್ಬರು ಪರಾರಿಯಾಗಿದ್ದಾರೆ.
ಘಟನಾ ಸ್ಥಳಕ್ಕೆ ಹಳೇಹುಬ್ಬಳ್ಳಿ ಠಾಣೆ ಇನ್ಸಪೆಕ್ಟರ್ ಶಿವಾನಂದ ಕಮತಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನಗರದ ವಿವಿಧೆಡೆ ನಾಕಾಬಂದಿ ಹಾಕಲಾಗಿದೆ.
ಹುಬ್ಬಳ್ಳಿಯಲ್ಲಿ ಹಾಡಹಗಲೇ ಖದೀಮರು ತಮ್ಮ ಕೈ ಚಳಕ ತೋರಿಸಿರುವುದು ಜನತೆಯನ್ನು ಬೆಚ್ಚುಬೀಳಿಸಿದೆ.