ಹುಬ್ಬಳ್ಳಿ prajakiran.com : ಮಗನ ಮದುವೆಗಾಗಿ ಸಂಗ್ರಹಿಸಿಟ್ಟಿದ್ದ 30 ತೊಲೆ ಬಂಗಾರ ಕಳವು ಆದ ಘಟನೆ ಹುಬ್ಬಳ್ಳಿಯ ಭೈರಿದೇವರಕೊಪ್ಪದ ವೀರ ಸಂಗೋಳ್ಳಿರಾಯಣ್ಣ ಬಡಾವಣೆಯಲ್ಲಿ ನಡೆದಿದೆ.
ಬ್ಯಾಂಕ್ ಉದ್ಯೋಗಿ ಮನೆ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು 15 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿ ಪರಾರಿಯಾದ ಘಟನೆ ಶುಕ್ರವಾರ ನಡೆದಿದೆ.
ನಗರದ ಕೆಸಿಸಿ ಬ್ಯಾಂಕ್ ನಿವೃತ್ತ ಉದ್ಯೋಗಿ ಪ್ರಭುಗೌಡ ಪಾಟೀಲ ಅವರ ಮನೆಯಲ್ಲಿಯೇ ಶುಕ್ರವಾರ ಬೆಳಗಿನ ಜಾವ ಮನೆಯ ಹಿಂಬಾಗಿಲ ಮೂಲಕ ಮೂಲಕ ಒಳಬಂದ ಕಳ್ಳರು ಈ ಕೃತ್ಯ ಎಸಗಿದ್ದಾರೆ.
ಪ್ರಭುಗೌಡ ಪಾಟೀಲ ತಮ್ಮ ಮಗನ ಮದುವೆಗಾಗಿ ಮಾಡಿಸಿಟ್ಟಿದ್ದ30 ತೊಲೆ ಬಂಗಾರ, ಬೆಳ್ಳಿ ಆಭರಣಗಳು ಹಾಗೂ 12ಸಾವಿರ ನಗದು ಕಳ್ಳತನವಾಗಿದೆ. ಬೆಳಗ್ಗೆ ಅಲ್ಮೆರಾ ತೆಗೆದು ನೋಡಿದಾಗ ಕಳ್ಳತನವಾಗಿರುವುದು ಬಯಲಿಗೆ ಬಂದಿದೆ.
ಕರೋನಾ ಲಾಕ್ ಡೌನ್ ಹಿನ್ನಲೆಯಲ್ಲಿ ಮದುವೆ ಮುಂದೂಡಲಾಗಿತ್ತು. ಆದ್ದರಿಂದ ಮನೆಯಲ್ಲಿಯೇ ಆಭರಣಗಳನ್ನು ಇಟ್ಟುಕೊಂಡಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಈ ಕುರಿತು ಹುಬ್ಬಳ್ಳಿಯ ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮನೆಯ ಸುತ್ತಲಿನ ಸಿಸಿ ಟಿವಿ ಕ್ಯಾಮರಾದ ದೃಶ್ಯಗಳನ್ನು ಪೊಲೀಸರು ಪರಿಶೀಲಿಸಿದ್ದಾರೆ.