ಸಿನಿಮಾ

ಕೊರೊನಾ ಸಂಕಷ್ಟದಲ್ಲಿರುವ ಮತ್ತಷ್ಟು ಜೀವಗಳಿಗೆ ಸಹಾಯ ಮಾಡಿ ಎಂದ ಗೊಲ್ಡನ್ ಸ್ಟಾರ್

ಬೆಂಗಳೂರು prajakiran.com : ಇಂದು ಸ್ಯಾಂಡಲ್‌ವುಡ್ ಗೋಲ್ಡನ್‌ ಸ್ಟಾರ್ ಗಣೇಶ್‌ ಹುಟ್ಟುಹಬ್ಬ. ಪ್ರತಿವರ್ಷ ಗಣೇಶ್‌ ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳು, ಸ್ನೇಹಿತರು ಕುಟುಂಬ ವರ್ಗದೊಂದಿಗೆ ಆಚರಿಸಿಕೊಳ್ಳುತ್ತಿದ್ದರು.

ಆದರೆ ಕಳೆದ ವರ್ಷದಿಂದ ಕೊರೊನಾ‌ ಸೋಂಕು ಗೋಲ್ಡನ್‌ ಸ್ಟಾರ್‌ ಅದ್ಧೂರಿ ಬರ್ತ್‌ಡೇಗೆ ಬ್ರೇಕ್‌ ಹಾಕಿದೆ.

ಈಗಷ್ಟೇ ಕೊರೊನಾ ಎರಡನೇ ಅಲೆಯಿಂದ ಸ್ವಲ್ಪ ಮಟ್ಟಿಗೆ ಎಲ್ಲರೂ ನಿಟ್ಟುಸಿರು ಬಿಡುತ್ತಿದ್ದು, ಈ ಸಂದರ್ಭದಲ್ಲಿ ತಮ್ಮ ಹುಟ್ಟುಹಬ್ಬ ಆಚರಿಸೋದು ಬೇಡ ಎಂದು ನಟ ಗಣೇಶ್‌ ತಮ್ಮ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಗಣೇಶ್‌, “ಪ್ರತಿ ವರ್ಷವೂ ನನ್ನ ಜನ್ಮದಿನವನ್ನು ಹಬ್ಬದಂತೆ ಆಚರಿಸಿ ಆಶೀರ್ವದಿಸುತ್ತಾ ಬಂದಿರುವಿರಿ.

ಆದರೆ ಈ ವರ್ಷ ಕೊರೊನಾ ಮಹಾಮಾರಿಯ ಆರ್ಭಟಕ್ಕೆ ಸಿಕ್ಕು ನನ್ನ ಹಲವು ಸಿನಿಮಾ ಸಹೋದ್ಯೋಗಿಗಳು, ಆತ್ಮೀಯರು, ಗೆಳೆಯರು ಬಲಿಯಾದದ್ದು ನೋವು ತರಿಸಿದೆ. ಅದೆಷ್ಟೋ ಜನರ ಜೀವನಗಳು ನಲುಗಿ ಹೋಗಿವೆ.

ಇಷ್ಟೆಲ್ಲ ನೋವುಗಳ ನಡುವೆ ಸಂಭ್ರಮಕ್ಕಿದು ಸರಿಹೊಂದುವ ಸಮಯವಲ್ಲ ಎಂದೆನಿಸಿ, ಈ ವರ್ಷದ ಜನ್ಮದಿನವನ್ನು ಆಚರಿಸಿಕೊಳ್ಳದಿರಲು ಇಚ್ಚಿಸಿರುತ್ತೇನೆ.

ಅಲ್ಲದೇ, ಜನ್ಮದಿನದಂದು ನಾನು ಹೊರಾಂಗಣ ಚಿತ್ರೀಕರಣದಲಿ ತೊಡಗಿರುತ್ತೇನೆ.

ಪ್ರತಿ ವರ್ಷವೂ ಪ್ರೀತಿಯಿಂದ ಹುಟ್ಟುಹಬ್ಬ ಆಚರಣೆಗೆ ನೀವುಗಳು ಪ್ರೀತಿಯಿಂದ ತರುವ ಕೇಕ್‌, ಹಾರ, ಉಡುಗೊರೆ ಮುಂತಾದವುಗಳಿಗಾಗಿ ಈ ವರ್ಷ ಹಣ ವ್ಯಯಿಸದೇ, ಅದೇ ಖರ್ಚಿನ ಮೊತ್ತವನ್ನು ಕೊರೊನಾ ಸಂಕಷ್ಟದಲ್ಲಿರುವ ಮತ್ತಷ್ಟು ಜೀವಗಳಿಗೆ ಸಹಾಯ ಮಾಡಿ ಎಂದು ಕೇಳಿಕೊಳ್ಳುತ್ತೇನೆ. ಅದೇ ನನಗೆ ಶ್ರೀರಕ್ಷೆ’ ಎಂದಿದ್ದಾರೆ.

ಇನ್ನು, ಗಣೇಶ್‌ ಅವರ ಹುಟ್ಟುಹಬ್ಬಕ್ಕೆ ಯೋಗರಾಜ್‌ ಭಟ್‌ ನಿರ್ದೇಶನ “ಗಾಳಿಪಟ-2′ ಚಿತ್ರತಂಡ ಮೋಶನ್‌ ಪೋಸ್ಟರ್‌ ಬಿಡುಗಡೆ ಮಾಡಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *