ರಾಜ್ಯ

ಜೆಡಿಎಸ್ ಗೆ ವೈ ಎಸ್ ವಿ ದತ್ತ ಗುಡ್ ಬೈ : ಕಾಂಗ್ರೆಸ್ ಗೆ ಜೈ

ಬೆಂಗಳೂರು ಪ್ರಜಾಕಿರಣ.ಕಾಮ್ : ಚಿಕ್ಕಮಗಳೂರು ಜಿಲ್ಲೆಯ ಕಡೂರು ಕ್ಷೇತ್ರದ ಮಾಜಿ ಶಾಸಕ ವೈ ಎಸ್ ವಿ ದತ್ತ ಜೆಡಿಎಸ್ ತೊರೆದಿದ್ದಾರೆ.

ತಾವು ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿರುವುದಾಗಿ ಸ್ವತಃ ದತ್ತ ಖಚಿತಪಡಿಸಿದ್ದಾರೆ.

ನನಗೆ ಈಗ 70 ವರ್ಷವಾಗಿದೆ. 2023 ನನ್ನ ಕೊನೆಯ ಚುನಾವಣೆ. ಕಡೂರು ಕ್ಷೇತ್ರದ ಜನತೆಯ ನಿರ್ಧಾರಕ್ಕೆ ನನ್ನ ರಾಜಕೀಯ ನಿವೃತ್ತಿ ವಿಚಾರವನ್ನು ಬಿಟ್ಟಿದ್ದೇನೆ ಎಂದು ಹೇಳಿದರು.

ಕ್ಷೇತ್ರದಲ್ಲಿ ಜೆಡಿಎಸ್ ಭವಿಷ್ಯ ಮಂಕಾಗಿದೆ. ಕಾರ್ಯಕರ್ತರಿಗೆ ಬೇರೆ ಕಡೆ ವ್ಯವಸ್ಥೆ ಆಗಬೇಕು. ಅವರಿಗೆ ನೆಲೆಕೊಡಿಸಲು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ ಎಂದರು.

ದೇವೇಗೌಡರ ಜೊತೆ ನಾನು 20 ವರ್ಷಗಳಿಂದ ಇದ್ದೇನೆ. ನನಗೂ ಅವರಿಗೆ ತಂದೆ ಮಗನ ಸಂಬಂಧ. ನಾನು ದೇವೇಗೌಡರು ಇರುವವರೆಗೂ ಅವರ ಜೊತೆ ಇರುತ್ತೇನೆ ಎಂದು ಹೇಳಿದ್ದೆ.

ಆದರೆ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾಗುವ ಬಗ್ಗೆ ಒತ್ತಾಯಿಸಿದ್ದಾರೆ. ಕಾಂಗ್ರೆಸ್ ಪಕ್ಷ ಸೇರ್ಪಡೆ ದಿನಾಂಕ ಇನ್ನೂ ನಿರ್ಧಾರವಾಗಿಲ್ಲ ಎಂದರು‌

ಮೂಲದ ಪ್ರಕಾರ ಅವರು ಇದೇ ಡಿಸೆಂಬರ್ 17ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಸಮಾವೇಶದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ ಎಂದು ಹೇಳಲಾಗುತ್ತಿದೆ 

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *