ನವದೆಹಲಿ prajakiran.com : ಕೊರೋನಾಕ್ಕೆ ಸಂಬಂಧಿಸಿದ ಅಗತ್ಯವಾದ ಸಿದ್ಧತೆಗಳನ್ನು ಮಾಡಿಕೊಂಡು ಅದನ್ನು ಸಮರ್ಥವಾಗಿ ಎದುರಿಸಲು ಕೇಂದ್ರದ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರವು ಸಂಪೂರ್ಣವಾಗಿ ವಿಫಲವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಕೊರೋನಾ ಸೋಂಕಿನಿಂದ ದಿನನಿತ್ಯ ಸಾವಿರಾರು ಜನ ಸಾಯುತ್ತಿರುವವರ ಸುದ್ದಿಯನ್ನು ಕೇಳಿದರೆ ಮನಸ್ಸಿಗೆ ತುಂಬಾ ನೋವಾಗುತ್ತದೆ.
ಇದರ ಹೊಣೆ ಹೊರುವವರು ಯಾರೂ ಇಲ್ಲ. ಹೊಣೆ ಹೊರಬೇಕಾದವರೇ ಅಡಗಿ ಕುಳಿತರೆ ಏನು ಮಾಡಲು ಸಾಧ್ಯ ಎಂದು ಕಿಡಿಕಾರಿದ್ದಾರೆ.
ಕೊರೋನಾ ಸೋಂಕು ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ಸೋತಿದೆ. ಜನರೇ ಈ ಬಗ್ಗೆ ಸರ್ಕಾರವನ್ನು ಪ್ರಶ್ನೆ ಮಾಡಬೇಕಿದೆ ಎಂದಿದ್ದಾರೆ.