ಬೆಂಗಳೂರು prajakiran.com :
ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕಠಿಣ ನಿಯಮಗಳನ್ನು ಜಾರಿ ಮಾಡಿದೆ.
ಇದಕ್ಕಾಗಿ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು,
ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ರವಿಕುಮಾರ್ ಈ ಮಹತ್ವದ ಆದೇಶ ಹೊರಡಿಸಿದ್ದಾರೆ.
ಕೋವಿಡ್ ನಿಯಂತ್ರಣಕ್ಕೆ ನಾಳೆಯಿಂದ ಏ. 21ರಿಂದ ಮುಂದಿನ 14 ದಿನಗಳಿಗೆ ಅನ್ವಯವಾಗುವಂತೆ ಕಠಿಣ ಮಾರ್ಗಸೂಚಿ ಜಾರಿ ಮಾಡಲಾಗಿದೆ ಎಂದು ವಿವರಿಸಿದರು.
ಏ. 23 ರಿಂದ ಶುಕ್ರವಾರ ರಾತ್ರಿ 9 ಗಂಟೆಯಿಂದ ಏ 26 ರವರೆಗೆ ಸೋಮವಾರ ಬೆಳಿಗ್ಗೆ 6ಗಂಟೆಯವರೆಗೆ ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮುಂಜಾನೆ 6ರಿಂದ 10 ಗಂಟೆಯವರೆಗೆ ಮಾತ್ರ ಖರೀದಿ ಮಾಡಬಹುದು ಎಂದು ತಿಳಿಸಿದರು.
ಇನ್ನುಳಿದಂತೆ ಬಾರ್ ಆಂಡ್ ರೆಸ್ಟೋರೆಂಟ್ ಗಳಲ್ಲಿ ಪಾರ್ಸೆಲ್ ಗೆ ಮಾತ್ರ ಅವಕಾಶ.
ನಾಳೆಯಿಂದ ಏ. 21ರಿಂದ ಮೇ 4ರ ವರೆಗೆ ಹೊಸ ನಿಯಮಾವಳಿ ಅನ್ವಯವಾಗಲಿದೆ.
ಅದೇ ರೀತಿ ಮಾಲ್, ಸಿನಿಮಾ ಥಿಯೇಟರ್, ಜಿಮ್ ಬಂದ್ ಆಗಲಿರಲಿವೆ ಎಂದು ಸೂಚಿಸಿದರು.
ರಾಜ್ಯಾದ್ಯಂತ ಶಾಲೆ ಕಾಲೇಜುಗಳು ಸಂಪೂರ್ಣ ಬಂದ್ ಆಗಲಿವೆ.
ರಾತ್ರಿ ಕರ್ಫ್ಯೂ 9 ಗಂಟೆಯಿಂದ ಬೆಳಗ್ಗೆ 6 ಗಂಟೆಯವೆರಗೆ ಸಂಪೂರ್ಣ ಬಂದ್ ಆಗಿರಲಿದೆ.
ಹೋಟೆಲ್ ಗಳಲ್ಲಿ ಶೇ.50ರಷ್ಟು ಸೀಟ್. ರಾತ್ರಿ 9 ಗಂಟೆ ಮೇಲೆ ಅಗತ್ಯ ವಸ್ತು ಬಿಟ್ಟು ಎಲ್ಲ ಬಂದ್ ಆಗಲಿವೆ ಎಂದು ರಾಜ್ಯ ಸರಕಾರದ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ತಿಳಿಸಿದರು.