ಧಾರವಾಡ prajakiran.com : ಕಳೆದ ವರ್ಷದ ಅತಿವೃಷ್ಟಿಯಿಂದಾಗಿ ಹಾನಿಗೀಡಾಗಿದ್ದ ಮನೆಗಳ ಪುನರ್ನಿರ್ಮಾಣ ಕಾರ್ಯವನ್ನು ಚುರುಕುಗೊಳಿಸಿ ಜಿಪಿಎಸ್ಗೆ ಅಳವಡಿಸಲು ಜಿಲ್ಲಾಧಿಕಾರಿ ದೀಪಾ ಚೋಳನ್ ಸೂಚಿಸಿದರು.
ಅವರು ಗುರುವಾರ ಮನೆಗಳ ನಿರ್ಮಾಣ ಪರಿಶೀಲನೆ ನಡೆಸಿ ಮಾತನಾಡಿದರು. ಜೂನ್ ೩ ರ ವರೆಗೆ ‘ಎ’ ಕೆಟಗೇರಿಯ ೧೧೦ ಮನೆಗಳ ನಿರ್ಮಾಣ ಆರಂಭವಾಗಿದೆ.
ಇನ್ನು ೮ ಮನೆಗಳ ನಿರ್ಮಾಣ ಕಾರ್ಯ ಕೂಡಲೇ ಪ್ರಾರಂಭಿಸಬೇಕು. ‘ಬಿ’ ಕೆಟಗೇರಿಯಲ್ಲಿ ೧೪೬೬ ಮನೆಗಳ ನಿರ್ಮಾಣ ಕಾರ್ಯ ಪ್ರಾರಂಭವಾಗಿದೆ.
‘ಸಿ’ ಕೆಟಗೇರಿಯ ೧೯೧೭೦ ಮನೆಗಳಲ್ಲಿ ಈಗಾಗಲೇ ಬಹುತೇಕ ಮನೆಗಳ ನಿರ್ಮಾಣ ಕಾರ್ಯ ಪ್ರಾರಂಭವಾಗಿದೆ. ಅವುಗಳನ್ನು ತ್ವರಿತವಾಗಿ ಜಿಪಿಎಸ್ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.