ಹುಬ್ಬಳ್ಳಿ prajakiran.com : ಭಾರಿ ಮಳೆಯ ಹಿನ್ನೆಲೆಯಲ್ಲಿ ಕೊಂಕಣ ರೈಲ್ವೆ ಮಾರ್ಗದಲ್ಲಿ ಗುಡ್ಡ ಕುಸಿದಿದೆ.
ನಿಜಾಮೋದ್ದಿನ್- ವಾಸ್ಕೋ ಟ್ರೈನ್ ಮೇಲೆ ಗುಡ್ಡ ಕುಸಿದಿದೆ.
ಚಲಿಸುತ್ತಿದ್ದ ರೈಲಿನ ಮೇಲೆ ಗುಡ್ಡ ಕುಸಿತಗೊಂಡಿದೆ.
ಗುಡ್ಡ ಕುಸಿದ ಪರಿಣಾಮ ರೈಲ್ವೆ ಟ್ರ್ಯಾಕ್ ಸಂಪೂರ್ಣ ಬಂದ್ ಆಗಿದೆ.
ಗುಡ್ಡ ಕುಸಿತದಿಂದ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಟ್ರ್ಯಾಕ್ ಮೇಲೆ ಬಿದ್ದ ಮಣ್ಣು ತೆರವು ಕಾರ್ಯಚರಣೆ ನಡೆಸುತ್ತಿರುವ ನೈರುತ್ಯ ರೈಲ್ವೆ ಸಿಬ್ಬಂದಿ
ಇದರಿಂದಾಹಿ ರೈಲ್ವೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.
ಈ ಹಿನ್ನೆಲೆಯಲ್ಲಿ ಪ್ರಯಾಣಿಕರಿಗೆ ಊಟ,ಉಪಹಾರ, ಕಾಫಿ-ಟೀ ವ್ಯವಸ್ಥೆಯನ್ನು ರೈಲ್ವೆ ಇಲಾಖೆ ಮಾಡಿದೆ.
ನೈರುತ್ಯ ರೈಲ್ವೆ ವಿಭಾಗದ ಜನರಲ್ ಮ್ಯಾನೇಜರ್ ಅರವಿಂದ ಮಲಖಾಡೆ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ದೂದ್ ಸಾಗರ-ಸೋಲೆಂ ಹಾಗೂ ದೂದಸಾಗರ- ಕ್ಯಾಸಲ್ ರಾಕ್ ಮಧ್ಯೆ ಎರಡು ಕಡೆ ಗುಡ್ಡ ಕುಸಿತ ಸಂಭವಿಸಿದೆ.