ರಾಜ್ಯ

ಸರ್ಕಾರದ ನೆರವಿನ ನಿರೀಕ್ಷೆಯಲ್ಲಿ ಎರಡು ಕಿಡ್ನಿ ಕಳೆದುಕೊಂಡ ಅತಿಥಿ ಉಪನ್ಯಾಸಕ

ರಾಯಚೂರು prajakiran.com : ಕಳೆದ ಆರು ವರ್ಷಗಳಿಂದ ರಾಯಚೂರು ಜಿಲ್ಲೆಯ ಲಿಂಗಸುಗೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇತಿಹಾಸ ವಿಷಯದ ಅತಿಥಿ ಉಪನ್ಯಾಸಕರಾಗಿ ಸೇವೆಸಲ್ಲಿಸುತ್ತಿದ್ದ   ದೇವದುರ್ಗ ತಾಲೂಕಿನ ಆಲ್ಕೋಡ್ ಗ್ರಾಮದ ಡಾ.ಅಮರೇಶ್ ತಂದೆ ಹನುಮಂತ ಆಲ್ಕೋಡ್ ಕಳೆದ ಮೂರು ವರ್ಷಗಳಿಂದ ಎರಡು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದಾರೆ.

ಅವರು ವಾರಕ್ಕೆ ಎರಡು ಸಾರಿ ಡಯಾಲಿಸಸ್ ಮಾಡಿಸಿಕೊಳ್ಳುತ್ತಿದ್ದು, ಡಯಾಲಿಸಸ್ ಮತ್ತು ಕಿಡ್ನಿಗಳ ಚಿಕಿತ್ಸೆಯ ಸಲುವಾಗಿ ಇದುವರೆಗೂ ಸುಮಾರು 15-20 ಲಕ್ಷ ರೂ. ಈಗಾಗಲೇ ಸಾಲಸೂಲ ಖರ್ಚು ಮಾಡಿಕೊಂಡಿದ್ದಾರೆ.

ಅಲ್ಲದೇ ಕಳೆದ ತಿಂಗಳಷ್ಟೇ ಹೃದಯಾಘಾತದಿಂದ ಇವರ ಪತ್ನಿ ಕೂಡ ಮೃತಪಟ್ಟಿದ್ದಾರೆ. ಮನೆಯಲ್ಲಿ ಉಂಟಾದ ಆರ್ಥಿಕ ಪರಿಸ್ಥಿತಿಯಿಂದಾಗಿ ಹೆಂಡತಿಗೆ ಚಿಕಿತ್ಸೆ ಕೊಡಿಸಲಾಗದೆ ಡಾ.ಅಮರೇಶ್ ಆಲ್ಕೋಡ್ ಹೆಂಡತಿಯನ್ನು ಕಳೆದುಕೊಂಡಿದ್ದಾರೆ. 



ಇನ್ನೂ ತನ್ನ ಮಕ್ಕಳ ಪಾಲನೆಗಾಗಿ ಮತ್ತು ತನ್ನ ಮುಂದಿನ ಜೀವನಕ್ಕಾಗಿ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಈ ಕುರಿತು ವಿಡಿಯೋವೊಂದನ್ನು ಮಾಡಿರುವ ಇವರು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಉನ್ನತ ಶಿಕ್ಷಣ ಸಚಿವರಾದ ಡಾ.ಸಿ.ಎನ್ ಅಶ್ವತ್ ನಾರಾಯಣ ಅವರಿಗೆ ತನ್ನ ಕುಟುಂಬದ ನೋವನ್ನುತೋಡಿಕೊಂಡಿದ್ದಾರೆ.

ತಮ್ಮ ನೆರವಿಗೆ ಧಾವಿಸುವಂತೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಇವರ ಆರೋಗ್ಯ ದೃಷ್ಟಿಯಿಂದ ಹಾಗೂ ಇವರ  ಮಕ್ಕಳ ಭವಿಷ್ಯದ ಸಲುವಾಗಿ ಸರ್ಕಾರ ಇವರ ನೆರವಿಗೆ ಮುಂದಾಗಲಿ. ಇವರಿಗೆ ಸರ್ಕಾರದ ವತಿಯಿಂದ ಒಳ್ಳೆಯ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ದೊರೆಯಲಿ ಎಂಬುದು ಜನರ ಮತ್ತು ಕುಟುಂಬದ ಮನವಿಯಾಗಿದೆ. 



ಡಾ.ಅಮರೇಶ್ ಆಲ್ಕೋಡ್ ಅವರ ನೋವಿಗೆ ಸ್ಪಂದಿಸುವ ಮನಸ್ಸುಗಳು, ಇವರ ಕುಟುಂಬಕ್ಕೆ ನೆರವಾಗುವ ಹೃದಯವಂತರು ಅವರ ದೂರವಾಣಿ ಸಂಖ್ಯೆ: 6364056438‌ & 8105559685 ಗೆ ಕರೆಮಾಡಿ ಧೈರ್ಯ ಹೇಳಿ.

ಬ್ಯಾಂಕ್ ಖಾತೆಯ ವಿವರ: ಡಾ. ಅಮರೇಶ್ ಆಲ್ಕೋಡ್, ಎಸ್.ಬಿ.ಐ ಬ್ಯಾಂಕ್, ಸಿರವಾರ ಶಾಖೆ, ಖಾತೆ ಸಂಖ್ಯೆ 31090846274 ಐ.ಎಫ್.ಎಸ್.ಸಿ ಕೋಡ್: SBIN0011137 ಮೂಲಕ ಕೈಲಾದ ಸಹಾಯ ಮಾಡಬಹುದಾಗಿದೆ.



PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *