ಧಾರವಾಡ ಪ್ರಜಾಕಿರಣ.ಕಾಮ್ : ಧಾರವಾಡ ತಾಲೂಕಿನ ಹಾರೋಬೆಳವಡಿ ಗ್ರಾಮದ ರೈತ ಸಂಗಪ್ಪ ಕಡಲೆ ಎಂಬುವವರಿಗೆ ಸೇರಿದ ಎರಡು ಬಣವೆಗಳಿಗೆ ಆಕಸ್ಮಿಕ ಬೆಂಕಿ ತಗಲಿ ಅಂದಾಜು 70 ಸಾವಿರ ಮೌಲ್ಯದ ಮೇವು ಸುಟ್ಟ ಕರಕಲಾಗಿದೆ.
ಇಂದು ಮಧ್ಯಾಹ್ನ ಏಕಾಏಕಿ ಎರಡೂ ಬಣವೆಗಳಿಗೆ ಬೆಂಕಿ ತಗುಲಿದ್ದು, ವಿಷಯ ಗೊತ್ತಾದ ಕೂಡಲೇ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದರು.
ಬೆಂಕಿ ನಿಯಂತ್ರಣಕ್ಕೆ ಬಾರದೇ ಹೋಗಿದ್ದರಿಂದ ಕೂಡಲೇ ಅಗ್ನಿಶಾಮಕ ದಳದವರಿಗೆ ಮಾಹಿತಿ ಮುಟ್ಟಿಸಿದ್ದರಿಂದ ಸ್ಥಳಕ್ಕೆ ಬಂದ ಸವದತ್ತಿ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕೆಲಸ ಮಾಡಿದರು.
ಆದರೂ, ರೈತ ಸಂಗಪ್ಪ ಅವರಿಗೆ ಸೇರಿದ ಮೇವು ಸುಟ್ಟು ಕರಕಲಾಗಿದ್ದು, ರೈತ ಇದೀಗ ತಲೆ ಮೇಲೆ ಕೈಹೊತ್ತು ಕುಳಿತುಕೊಳ್ಳುವಂತಾಗಿದೆ.