ಹಾಸನ prajakiran.com : ಹಾಸನ ಜಿಲ್ಲೆಯಲ್ಲಿ ಭಾನುವಾರ ಹೊಸದಾಗಿ 5 ಕೋವಿಡ್-19 ಪ್ರಕರಣ ಪತ್ತೆಯಾಗಿದ್ದು, ಸೋಂಕಿತರೆಲ್ಲ ಚನ್ನರಾಯಪಟ್ಟಣ ತಾಲ್ಲೂಕಿನವರಾಗಿದ್ದಾರೆ.
ಇವರೆಲ್ಲಾ ಮುಂಬೈ ನಿಂದ ಬಂದಿರುತ್ತಾರೆ. ಆ ಮೂಲಕ ಹಾಸನ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 209ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ತಿಳಿಸಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಇದುವರೆಗೆ 124 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 85 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ವಿವರಿಸಿದ್ದಾರೆ.
ಹಾಸನಕ್ಕೆ ಬಹುತೇಕ ಮಹಾರಾಷ್ಟ್ರ ಹಾಗೂ ಮುಂಬೈನಿಂದ ಬಂದವರಿಂದಲೇ ಸೋಂಕು ಹರಡಿದ್ದು, ಎಲ್ಲರೂ ಸಾಂಸ್ಥೀಕ ಕ್ವಾರಂಟಿನ್ ನಲ್ಲಿ ಇದ್ದವರೇ ಆಗಿರುವುದು ಸ್ವಲ್ಪ ಸಮಾಧಾನದ ಸಂಗತಿಯಾಗಿದೆ.
ಅದರಲ್ಲೂ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯ ನಿರ್ವಹಿಸಿದ ಪೊಲೀಸರಿಗೆ ಹಾಗೂ ವಿವಿಧೆಡೆ ಕೆಲಸ ಕಾರ್ಯ ನಿರ್ವಹಿಸಿದ ಸಿಬ್ಬಂದಿಗೂ ಕರೋನಾ ತಗುಲಿದ್ದರಿಂದಅವರ ಜೊತೆಗೆ ಸಂಪರ್ಕ ಹೊಂದಿದ್ದರಿಂದ ಅವರಿಗೆ ಹೋಮ್ ಕ್ವಾರಂಟಿನ್ ಮಾಡಲಾಗಿತ್ತು.