ಅಪರಾಧ

ಚನ್ನರಾಯಪಟ್ಟಣದಲ್ಲಿ ವೃದ್ದ ದಂಪತಿಯ ಬರ್ಬರ ಹತ್ಯೆ

ಹಾಸನ prajakiran.com : ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ವೃದ್ದ ದಂಪತಿಯ ಬರ್ಬರ ಹತ್ಯೆ ನಡೆದಿದ್ದು, ಜಿಲ್ಲೆಯ ಜನತೆ ಮತ್ತೆ ಬೆಚ್ಚಿಬಿದ್ದಿದ್ದಾರೆ.

ಚನ್ನರಾಯಪಟ್ಟಣ ತಾಲೂಕಿನ ಆಲಗೊಂಡನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಮೃತ ವೃದ್ದ ದಂಪತಿಯನ್ನು ಮುರುಳೀಧರ್ , ಉಮಾದೇವಿ ಎಂದು ಗುರುತಿಸಲಾಗಿದೆ.

ಇಬ್ಬರನ್ನು ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಈ ವೃದ್ದ ದಂಪತಿಗಳಿಗೆಮಕ್ಕಳು ಇರಲಿಲ್ಲ.

80 ಎಕರೆ ಜಮೀನು ಹೊಂದಿದ್ದ ಮುರುಳೀಧರ್ ಹಾಗೂ ಉಮಾದೇವಿ ದಂಪತಿ ಇಬ್ಬರು ತೋಟದ ಮನೆಯಲ್ಲಿ ವಾಸವಿದ್ದರು.

ಮುರುಳೀಧರ್ ಅವರ ತಂದೆ ಕೃಷ್ಣಮೂರ್ತಿ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು. ಅವರಿಗೆ ಸರ್ಕಾರ ಎಂಭತ್ತು ಎಕರೆ ಜಮೀನು ನೀಡಿತ್ತು ಎಂದು ಹೇಳಲಾಗುತ್ತಿದೆ.

ಘಟನಾ ಸ್ಥಳಕ್ಕೆ ಹಾಸನ ಎಸ್.ಪಿ. ಶ್ರೀನಿವಾಸಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಕುರಿತು ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆ  ಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.

ಈ ಹಿಂದೆ ಕೂಡ ಸರಣಿ ಕೊಲೆಗಳಿಂದ ಚನ್ನರಾಯಪಟ್ಟಣ ಬೆಚ್ಚಬಿದ್ದಿತ್ತು. ಅದರ ಒತ್ತಡಕ್ಕೆ ಸಿಲುಕಿ ಪಿಎಸ್ ಐ ಆತ್ಮಹತ್ಯೆಯ ದಾರಿ ತುಳಿದಿದ್ದನ್ನುಇಲ್ಲಿ ಸ್ಮರಿಸಬಹುದು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *