ಬೆಂಗಳೂರು prajakiran.com : ಜೈನ ಸಮಾಜದ ಮುಖಂಡರು ಆಗಿದ್ದ ಹಾವೇರಿ ಜಿಲ್ಲಾ ಪಂಚಾಯತ ಅಧ್ಯಕ್ಷರಾಗಿದ್ದ ಬಸವರಾಜ ದೇಸಾಯಿ ಅವರು ಶನಿವಾರ ಅನಾರೋಗ್ಯದಿಂದ ನಿಧನರಾದರು.
ಕಳೆದ ಹದಿನೈದು ದಿನಗಳ ಹಿಂದೆ ಅನಾರೋಗ್ಯದಿಂದ ಬಳಲುತ್ತಿದ್ದಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಾಗಿದ್ದರು. ಆದರೆ ಇಂದು ಸಂಜೆ ಚಿಕಿತ್ಸೆ ಫಲಿಸದೆ ಇಹಲೋಕ ತ್ಯಜಿಸಿದರು.
ಅವರು ದುಂಡಸಿ ಜಿಲ್ಲಾ ಪಂಚಾಯತ್ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಹಾವೇರಿ ಜಿಲ್ಲಾ ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಮೊದಲ ಅವಧಿಯಲ್ಲಿಯೇ ಅಧ್ಯಕ್ಷ ಗಾದಿ ಅಲಂಕರಿಸಿದ್ದರು.
ಅವರ ಅಂತ್ಯಕ್ರಿಯೆರನ್ನು ಹುಬ್ಬಳ್ಳಿ ಲಿಂಗರಾಜ ನಗರದಲ್ಲಿ ಸೆ. 20ರಂದು ಮಧ್ಯಾಹ್ನ 12 ಗಂಟೆಗೆ ನಡೆಸಲಾಗುವುದು ಎಂದು ಅವರ ಕುಟುಂಬ ಮೂಲಗಳು ಪ್ರಜಾಕಿರಣ.ಕಾಮ್ ಗೆ ತಿಳಿಸಿವೆ.
ಅವರು ಕಲಘಟಗಿ ಮಾಜಿ ಶಾಸಕ ಸಂತೋಷ ಲಾಡ್ ಅವರ ಆಪ್ತರಾಗಿದ್ದರು. ತಮ್ಮ ಸರಳ, ಸಜ್ಜನಿಕೆ ಮೂಲಕವೇ ಗುರುತಿಸಿಕೊಂಡಿದ್ದರು. ಅವರ ನಿಧನಕ್ಕೆ ಧಾರವಾಡ ಹಾಗೂ ಹಾವೇರಿಯಅನೇಕ ಮುಖಂಡರು ಕಂಬನಿ ಮಿಡಿದಿದ್ದಾರೆ.