ರಾಜ್ಯ

ಕೋವಿಡ್‌ನಿಂದ ಮೃತಪಟ್ಟ ಶಿಕ್ಷಕರ ಕುಟುಂಬಕ್ಕೆ 50 ಲಕ್ಷ ಪರಿಹಾರ ನೀಡಿ

ಮಾಜಿ ಸಿಎಂ ಎಚ್‌ಡಿಕೆ ಆಗ್ರಹ

ಬೆಂಗಳೂರು prajakiran.com : ಕೊರೋನಾ ಸೋಂಕಿನಿಂದ ಮೃತಪಟ್ಟ ಎಲ್ಲ ಶಿಕ್ಷಕರನ್ನು ಕೊರೋನಾ ವಾರಿಯರ್ಸ್ ಎಂದು ಪರಿಗಣಿಸಿ, ಅವರ ಕಟುಂಬಕ್ಕೆ 50 ಲಕ್ಷ ರೂ. ಪರಿಹಾರ ನೀಡುವಂತೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಈ ಕುರಿತು ಸಾಮಾಜಿಕ ಮಾದ್ಯಮವಾದ ಟ್ವಿಟರ್‌ನಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, ಚುನಾವಣೆ ಕರ್ತವ್ಯದಲ್ಲಿ ದುಡಿದ ಮತ್ತು ವಿದ್ಯಾಗಮ ಯೋಜನೆ ಮೂಲಕ ಪಾಠ ಮಾಡಿದ ಕಲ್ಯಾಣ ಕರ್ನಾಟಕದ 145 ಶಿಕ್ಷಕರು ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಉಳಿದ ಕಡೆ ಮೃತಪಟ್ಟವರ ಲೆಕ್ಕ ಸಿಗುತ್ತಿಲ್ಲ.

ಇನ್ನೂ ಸಾವಿರಾರು ಶಿಕ್ಷಕರು ಕೊರೋನಾ ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಶಿಕ್ಷಕರನ್ನು ಕೊರೋನಾ ವಾರಿಯರ್ಸ್ ಎಂದು ಪರಿಗಣಿಸಬೇಕು. ಅವರನ್ನು ಚುನಾವಣೆ ಹಾಗೂ ಮತ್ಯಾವುದೋ ಕಾರಣಕ್ಕೆ ನಿಯೋಜಿಸಿದ ಸರ್ಕಾರವೇ ಈ ಸಾವುಗಳ ಸಂಪೂರ್ಣ ಹೊಣೆ ಹೊರಬೇಕು ಎಂದು ಆಗ್ರಹಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *