ಬೆಂಗಳೂರು prajakiran.com : ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ವಿರುದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಅವರು ಸೋಮವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಮಂಡ್ಯ ಜಿಲ್ಲೆಗೆ ಇಂತಹ ಸಂಸದೆ ಹಿಂದೆ ಬಂದಿಲ್ಲ. ಮುಂದೆಯೂ ಬರುವುದಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.
ಕೆ.ಆರ್.ಎಸ್. ಡ್ಯಾಂ ಬಿರುಕು ಬಿಟ್ಟಿದೆ ಎಂಬ ಸಂಸದೆ ಸುಮಲತಾ ಅಂವರೀಶ್ ಅವರ ಹೇಳಿಕೆಗೆ ಗರಂ ಆಗಿ ಪ್ರತಿಕ್ರಿಯಿಸಿದ ಹೆಚ್.ಡಿ ಕುಮಾರಸ್ವಾಮಿ, ಕೆ.ಆರ್.ಎಸ್. ರಕ್ಷಣೆಯನ್ನು ಅವರೇ ಹೊತ್ತುಕೊಂಡಂತೆ ಹೇಳುತ್ತಿದ್ದಾರೆ.
ಸುಮ್ಮನೆ ಕೆ.ಆರ್.ಎಸ್. ಬಾಗಿಲಿಗೆ ಅವರನ್ನೇ ಮಲಗಿಸಿದರೆ ಇದು ನಿಲ್ಲಬಹುದೇನೋ ಎಂದು ಕಿಡಿಕಾರಿದ್ದಾರೆ.
ಏನೋ ಅನುಕಂಪದ ಅಲೆ ಮೇಲೆ ಅವರು ಗೆದ್ದು ಮಂಡ್ಯ ಸಂಸದೆಯಾಗಿದ್ದಾರೆ. ಈಗಲಾದರೂ ಅವರು ಕೆಲಸ ಮಾಡದಿದ್ದರೆ ಮುಂದಿನ ಚುನಾವಣೆಯಲ್ಲಿ ಜನರೇ ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕುಮಾರಸ್ವಾಮಿ ಎಚ್ಚರಿಸಿದ್ದಾರೆ.
ಇದಕ್ಕೆ ತಿರುಗೇಟು ನೀಡಿರುವ ಮಾಜಿ ಸಚಿವ ಚೆಲಯವರಾಯಸ್ವಾಮಿ ಯಾವುದೇ ಮಹಿಳೆ ಬಗ್ಗೆ ಈ ರೀತಿಯ ಹೇಳಿಕೆ ಸಲ್ಲದು ಎಂದು ಗುಡುಗಿದ್ದಾರೆ.
ಒಬ್ಬ ಮಾಜಿ ಸಿಎಂ ಆಗಿ ನಾಲಿಗೆ ಮೇಲೆ ಹಿಡಿತ ಸಾಧಿಸಬೇಕು ಎಂದು ಕುಟುಕಿದ್ದಾರೆ. ಇದು ಅವರಿಗೆ ಶೋಭೆ ತರಲ್ಲ ಎಂದು ಸಲಹೆ ನೀಡಿದರು.