ಬೆಂಗಳೂರು prajakiran.com : ರಾಜ್ಯದ ಬಿಜೆಪಿ ಸರಕಾರ ಕೋವಿಡ್ ನಿಯಂತ್ರಿಸುವ ವಿಷಯದಲ್ಲಿ ಸಂಪೂರ್ಣವಾಗಿ ವಿಫಲವಾಗಿದ್ದು, ಭ್ರಷ್ಟಾಚಾರ ದಲ್ಲಿ ಮಿಂದುದ್ದೆದ್ದಿದೆ.
ಜೊತೆಗೆ ಆಡಳಿತದಲ್ಲಿ ಹಸ್ತಕ್ಷೇಪ, ಆಡಳಿತ ರೂಢ ಶಾಸಕರ ಆರೋಪ, ಪ್ರತ್ಯಾರೋಪದ ಹಿನ್ನೆಲೆಯಲ್ಲಿ ತಕ್ಷಣ ವಿಶೇಷ ಅಧಿವೇಶನ ಕರೆಯುವಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಈ ಕುರಿತು ಸಿಎಂ ಯಡಿಯೂರಪ್ಪ, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ರಾಜ್ಯಪಾಲ ವಜುಭಾಯಿ ವಾಲಾ ಅವರಿಗೆ ಹೆಚ್ ಡಿಕೆ ಪತ್ರ ಬರೆದಿದ್ದಾರೆ.
ಪ್ರಮುಖವಾಗಿ ಕನ್ನಡ, ಕನ್ನಡಿಗ, ಕರ್ನಾಟಕದ ವಿಚಾರದಲ್ಲಿ ಆಗುತ್ತಿರುವ ಹಿನ್ನಡೆ ಕುರಿತು ಹತ್ತು ಹಲವು ವಿಷಯ ಪ್ರಸ್ತಾಪಿಸಬೇಕಿದೆ.
ಅಲ್ಲದೆ, ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ ಆರೋಪಿಸಿರುವ
ನೀರಾವರಿ ಯೋಜನೆಯ 20 ಸಾವಿರ ಕೋಟಿ ಕಿಕ್ ಬ್ಯಾಕ್ ಆರೋಪದ ಕುರಿತು ತನಿಖೆಯಾಗಬೇಕಿದೆ.
ಅಬಕಾರಿ ಸಚಿವರಿಗೆ ಪ್ರತಿ ಜಿಲ್ಲೆಯಿಂದ ತಿಂಗಳಿಗೆ ಐದು ಲಕ್ಷ ಮಾಮೂಲು ಆಡಿಯೋ ವೈರಲ್ ಬಗ್ಗೆ ಸಮರ್ಪಕ ಹಾಗೂ ಸುದೀರ್ಘ ಚರ್ಚೆ ಆಗಬೇಕಿದೆ.
ಕೊರೋನಾ ಲಾಕ್ ಡೌನ್ ನಲ್ಲಿ ಶ್ರಮಿಕರಿಗೆ, ಆಟೋ ಚಾಲಕರಿಗೆ ನೀಡಿದ ಪರಿಹಾರ ಸಮರ್ಪಕವಾಗಿ ಮುಟ್ಟಿಲ್ಲ.
ಮುಂದಿನ ದಿನಗಳಲ್ಲಿ ಬರುವ ಮೂರನೇ ಅಲೆಗೆ ಸರ್ಕಾರದ ಸಿದ್ಧತೆ ಬಗ್ಗೆಯೂ ಚರ್ಚಿಸಬೇಕಿದೆ.
ಹೀಗಾಗಿ ರಾಜ್ಯಪಾಲರು ತಕ್ಷಣ
ವಿಶೇಷ ಅಧಿವೇಶನ ಕರೆಯಬೇಕು ಎಂದು ಹೆಚ್ ಡಿ ಕೆ ಆಗ್ರಹಿಸಿದ್ದಾರೆ