ಶೀಘ್ರ ಗುಣಮುರಾಗಿ ಎಂದು ಬಿಎಸ್ವೈ ಹಾರೈಕೆ
ಬೆಂಗಳೂರು prajakiran.com : ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ನನ್ನ ಕೋವಿಡ್ ವರದಿ ಪಾಸಿಟಿವ್ ಬಂದಿದೆ.
ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಹಾಗೂ ಕ್ವಾರೆಂಟೀನ್ ಆಗಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಹಲವಾರು ರಾಜಕೀಯ ವ್ಯಕ್ತಿಗಳಿಗೆ ಕರೋನಾ ದೃಢಪಟ್ಟಿದ್ದು, ಇದೀಗ ಕುಮಾರಸ್ವಾಮಿ ಅವರಿಗೂ ಕೊರೋನಾ ಸೋಂಕು ಹರಡಿರುವುದು ದೃಢಪಟ್ಟಿದೆ.
ಈ ವಿಷಯ ತಿಳಿದ ಬಿಎಸ್ ಯಡಿಯೂರಪ್ಪ ಅವರು ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿಯವರು ಕೊರೋನಾ ಸೋಂಕಿನಿಂದ ಶೀಘ್ರದಲ್ಲಿ ಗುಣಮುಖರಾಗಲಿ, ಸಂಪೂರ್ಣ ಚೇತರಿಸಿಕೊಂಡು ಎಂದಿನಂತೆ ತಮ್ಮ ಕೆಲಸ ಕಾರ್ಯಗಳಲ್ಲಿ ತೊಡಗಿಕೊಳ್ಳಲಿ ಎಂದು ಟ್ವೀಟ್ ಮಾಡಿ ಹಾರೈಸಿದ್ದಾರೆ.