ಬೆಳಗಾವಿ prajakiran.com : ಧಾರವಾಡದ ಎಸ್ ಡಿಎಂ ಆಸ್ಪತ್ರೆಯಲ್ಲಿ ಬ್ರೇನ್ ಡೆಡ್ ಆಗಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿಯ ಹೃದಯವನ್ನು ಬೆಳಗಾವಿಯ ಹುಡುಗನಿಗೆ ಜೋಡಿಸಲು ಬೆಳಗಾವಿಯ ಕೆ ಎಲ್ ಇ ಆಸ್ಪತ್ರೆ ವೈದ್ಯರು ಮುಂದಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ಆ ಹೃದಯವನ್ನು ಗ್ರೀನ್ ಕಾರಿಡಾರ್ ಮೂಲಕ ಇಂದು ಸಂಜೆ ಧಾರವಾಡದಿಂದ ಬೆಳಗಾವಿಯ ಕೆ ಎಲ್ ಇ ಆಸ್ಪತ್ರೆಗೆ ಕೊಂಡೊಯ್ಯಲಾಯಿತು
ಬೆಳಗಾವಿಯ ಕೆಎಲ್ ಇ ಆಸ್ಪತ್ರೆಯಲ್ಲಿ ಹೃದಯ ಸಂಬಂಧಿ ಕಾಯಿಲೆಯಿಂದ ಚಿಕಿತ್ಸೆ ಪಡೆಯುತ್ತಿದ್ದ ಹುಡುಗನಿಗೆ ಈ ಹೃದಯದ ಕಸಿ ಜೋಡಣೆ ಮಾಡಲಾಗುತ್ತದೆ.
ಈ ಹಿನ್ನೆಲೆಯಲ್ಲಿ ಧಾರವಾಡದಿಂದ ಬೆಳಗಾವಿ ಕೆ ಎಲ್ ಇ ಆಸ್ಪತ್ರೆವರೆಗೆ ಇಂದು ಝೀರೊ ಟ್ರಾಫಿಕ್ ನಿರ್ಮಾಣಕ್ಕೆ ಪೊಲೀಸರು ಸಜ್ಜಾಗಿದ್ದರು.
ಇಂದು ಸಂಜೆ ನಾಲ್ಕು ಗಂಟೆಗೆ ಎಸ್ ಡಿ ಎಂ ಆಸ್ಪತ್ರೆಯಿಂದ ಬೆಳಗಾವಿ ಕೆಎಲ್ ಇ ಆಸ್ಪತ್ರೆಗೆ ಝಿರೋ ಟ್ರಾಫಿಕ್ ನಲ್ಲಿ ಹೃದಯ ರವಾನೆಯಾಯಿತು. ಈ ನಿಟ್ಟಿನಲ್ಲಿ ಎರಡು ಜಿಲ್ಲೆಯ ಪೊಲೀಸರು ಗ್ರೀನ್ ಕಾರಿಡಾರ್ ನಿರ್ಮಾಣಕ್ಕೆ ವ್ಯವಸ್ಥೆ ಕಲ್ಪಿಸಿದ್ದರು.
ಧಾರವಾಡದಿಂದ ಬೆಳಗಾವಿಯವರೆಗೂ ಸಂಚಾರಕ್ಕೆ ಅಡ್ಡಿಯಾಗದಂತೆ ಪೊಲೀಸರನ್ನು ನಿಯೋಜಿಸಲಾಗಿತ್ತು ಎಂದು ಬೆಳಗಾವಿ ಎಸ್ಪಿ ಸಂಜೀವ್ ಪಾಟೀಲ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಹು-ಧಾ ನಗರ, ಧಾರವಾಡ ಗ್ರಾಮೀಣ, ಬೆಳಗಾವಿ ಗ್ರಾಮಾಂತರ, ಬೆಳಗಾವಿ ನಗರ ವ್ಯಾಪ್ತಿಯ ಪೊಲೀಸ್ ಸಿಬ್ಬಂದಿ ಹಸಿರು ನಿಶಾನೆ ತೋರಿಸಿದ್ದರು ಎಂದು ಧಾರವಾಡ ಜಿಲ್ಲಾ ಪೊಲೀಸ್ ಅಧಿಕಾರಿ ಲೋಕೇಶ ಜಗಲಾಸರ್ ಮಾಹಿತಿ ನೀಡಿದರು.