ಬೆಂಗಳೂರು prajakiran.com: ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ ಅಧ್ಯಕ್ಷ ಮಹಾಬಲೇಶ್ವರ ಹೆಗಡೆ (73) ಭಾನುವಾರ ಬೆಳಗ್ಗೆ ನಿಧನ ಹೊಂದಿದರು.
ಬೆಳಗ್ಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ಕರೆದೊಯ್ಯುಲಾಗಿತ್ತು. ಆದರೆ ಚಿಕಿತ್ಸೆಗೆ ಫಲಕಾರಿಯಾಗದೆ ವಿಧಿವಶರಾದರು.
ಹುಬ್ಬಳ್ಳಿಯ ಕಾಡಸಿದ್ದೇಶ್ವರ ಆರ್ಟ್ಸ್ ಕಾಲೇಜು ಮತ್ತು ಪಿಸಿ ಜಬಿನ್ ಕಾಲೇಜುಗಳಲ್ಲಿ ಉಪನ್ಯಾಸಕರಾಗಿ ಕೆಲಸ ಮಾಡಿದ್ದರು.
ಸಂಸ್ಕೃತದಲ್ಲಿ ಅಪಾರ ಪಾಂಡಿತ್ಯ ಹೊಂದಿದ್ದ ಅವರು ಸಂಸ್ಕೃತ ಉಪನ್ಯಾಸಕರಾಗಿಯೂ ಸಹ ಸೇವೆ ಸಲ್ಲಿಸಿದ್ದರು.
ಯಕ್ಷಗಾನದ ಬಗ್ಗೆ ಒಲವು ಹೊಂದಿದ್ದ ಅವರು
ಸೀತಾ ವಿಯೋಗ, ತ್ರಿಶಂಕು ಚರಿತೆ, ರಾಜಾ ಕಂದಾಮ ಸೇರಿ 15ಕ್ಕೂ ಹೆಚ್ಚು ಪ್ರಸಂಗಗಳನ್ನು ರಚಿಸಿದ್ದಾರೆ.
ಅಲಂಕಾರ ತತ್ವ, ಭಾರತೀಯ ತತ್ವಶಾಸ್ತ್ರ ಪರಿಚಯ, ಬ್ರಹ್ಮಸೂತ್ರ ಚತು; ಸೂತ್ರಿ, ಮತ್ತು ಸಿದ್ಧಾಂತ ಬಿಂದು ಮುಂತಾದ ಗ್ರಂಥಗಳನ್ನು ಅವರು ರಚಿಸಿದ್ದಾರೆ.