ಬೆಂಗಳೂರುprajakiran.com, ಡಿ. 08: ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತಕ್ಕೆ ಈಡಾಗಿರುವ ಘಟನೆ ತಮಿಳುನಾಡಿನ ಕೂನೂರು ಬಳಿ ಸಂಭವಿಸಿದೆ
ಸೇನೆ ಮುಖ್ಯಸ್ಥ ಬಿಪಿನ್ ರಾವತ್ ಸೇರಿ ಹದಿನಾಲ್ಕು ಜನ ಪ್ರಯಾಣಿಸುತ್ತಿದ್ದ ಸೇನೆಯ ಹೆಲಿಕಾಪ್ಟರ್ ಇದಾಗಿತ್ತು.
ತಕ್ಷಣ ತಮಿಳುನಾಡಿನ ಅಂಬುಲೆನ್ಸ್ ಮೂಲಕ ವೆಲಿಂಗ್ಟನ್ ಸೇನೆ ಆಸ್ಪತ್ರೆಗೆ ಸೇರಿಸಲಾಯಿತು
ಇದರಲ್ಲಿ ಸೇನೆ ಮುಖ್ಯಸ್ಥ ಬಿಪಿನ್ ರಾವತ್ ಅವರ ಪರಿಸ್ಥಿತಿ ಚಿಂತಾಜನಕವಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಈ ಸುದ್ದಿ ಕೇಳಿ ದಿಗ್ಭ್ರಮೆ ಹಾಗೂ ಆಘಾತ ಉಂಟಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅಪಘಾತದ ಕುರಿತು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಈ ಬಗ್ಗೆ ಪೂರ್ಣ ವಿವರಗಳನ್ನು ಪಡೆದುಕೊಳ್ಳಲಾಗುತ್ತಿದೆ.
ಘಟನಾ ಸ್ಥಳದಲ್ಲಿ ಶೋಧನೆಯಾಗುತ್ತಿದ್ದು, ಬಿಪಿನ್ ರಾವತ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದೊಂದು ಅತ್ಯಂತ ದುರದೃಷ್ಟಕರ ಘಟನೆ, ಇಡೀ ದೇಶ ದಿಗ್ಭ್ರಾಂತಗೊಂಡಿದೆ ಎಂದರು.