ಸಿನಿಮಾ

ವಿಶೇಷ ಚೇತನ ಮಕ್ಕಳ ಶಾಲೆಗೆ ಕಿಚ್ಚನ ಸಹಾಯ ಹಸ್ತ

ಬೆಂಗಳೂರು prajakiran.com : ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಕೊರೋನಾ ಸಂಕಷ್ಟದಲ್ಲಿರುವ ಹಲವಾರು ಜನರಿಗೆ ನೆರವು ನೀಡತ್ತಿದ್ದಾರೆ.

ಚಾಮರಾಜನಗರದ ಗುಂಡ್ಲುಪೇಟೆಯಲ್ಲಿರುವ ಮಾನಸಿಕ ವಿಶೇಷ ಚೇತನ ಮಕ್ಕಳಿರುವ ಪೃಥ್ವಿ ವಸತಿ ಶಾಲೆ ಮಳೆಯಿಂದ ಸೋರುತ್ತಿತ್ತು.

ಅಲ್ಲದೆ ಲಾಕ್‌ಡೌನ್ ನಿಂದ ಆಹಾರಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.

ಸುಮಾರು 40 ಕ್ಕೂ ಹೆಚ್ಚು ಮಕ್ಕಳಿರುವ ಈ ಶಾಲೆಗೆ ಕಿಚ್ಚ ಸುದೀಪ್ ಚಾರಿಟೇಬಲ್ ಟ್ರಸ್ಟ್ ನೆರವು ನೀಡಲು ಮುಂದಾಗಿದೆ.

ಕಿಚ್ಚ ಸುದೀಪ್ ಚಾರಿಟೇಬಲ್ ರಾಜ್ಯ ಮುಖಂಡ ರಮೇಶ್ ಕಿಟ್ಟಿ ಹಾಗೂ ಜಿಲ್ಲಾ ಮುಖಂಡರಾದ ಸೋಮ ನಾಯಕ, ಪರಶಿವ ಅವರ ತಂಡ ಶಾಲೆಗೆ ಭೇಟಿ ನೀಡಿ, ಒಂದು ತಿಂಗಳಿಗಾಗುವಷ್ಟು ಆಹಾರದ ಕಿಟ್ ವಿತರಿಸಿ ವಸತಿ ಶಾಲೆಯ ಮೂಲ ಸೌಕರ್ಯ ಅಭಿವೃದ್ಧಿ ಮಾಡಲೂ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.

ಈ ವಸತಿ ಕಟ್ಟಡ ಬಾಡಿಗೆಯದ್ದಾಗಿದ್ದು, ಅವಕಾಶ ಕೊಟ್ಟರೇ ಇದೇ ಕಟ್ಟಡವನ್ನು ದುರಸ್ತಿ ಮಾಡಿಸಲಾಗುವುದು. ಇಲ್ಲವೇ ಬೇರೆ ಕಟ್ಟಡಕ್ಕೆ ಸ್ಥಳಾಂತರಿಸುವ ಕೆಲಸವನ್ನು ಮಾಡುವುದಾಗಿ ತಿಳಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *