ಬೆಂಗಳೂರು prajakiran.com : ರಾಜ್ಯದಲ್ಲಿ ಶನಿವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 11 ಜನ ಸಾವನ್ನಪ್ಪಿದ್ದಾರೆ.
ಮತ್ತೆ ಹೊಸದಾಗಿ 918 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 11923 ಕ್ಕೆ ಏರಿಕೆಯಾಗಿದೆ.
ಇಂದು ರಾಜ್ಯದಲ್ಲಿ 371 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 7287 ಜನ ಗುಣಮುಖರಾಗಿದ್ದು, 4441 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 197 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ ಶನಿವಾರವೂ 11 ಜನ ಮೃತಪಟ್ಟಿದ್ದು, ಈವರೆಗೆ ಸಾವನ್ನಪ್ಪಿದ್ದವರ ಸಂಖ್ಯೆ 191ಕ್ಕೆ ಏರಿಕೆಯಾದಂತಾಗಿದೆ.
ಶನಿವಾರ ಪತ್ತೆಯಾದ 918 ಪ್ರಕರಣಗಳಲ್ಲಿ ರಾಜ್ಯದ ರಾಜಧಾನಿ ಬೆಂಗಳೂರು ನಗರ ದಲ್ಲಿಯೇ ಅತಿ ಹೆಚ್ಚು ಸೋಂಕಿತರು ಕಂಡು ಬಂದಿದ್ದಾರೆ. ನಿನ್ನೇ 144 ಸೋಂಕಿತರನ್ನು ಕಂಡಿದ್ದ ಬೆಂಗಳೂರು ಇಂದು ಬರೋಬ್ಬರಿ 596 ಜನ ಸೋಂಕಿತರು ಕಂಡು ಬಂದಿರುವುದು ಬೆಂಗಳೂರಿಗರನ್ನು ಮತ್ತೆ ಬೆಚ್ಚಿಬೀಳಿಸುವಂತೆ ಮಾಡಿದೆ.
ಇನ್ನೂಳಿದಂತೆ ದಕ್ಷಿಣ ಕನ್ನಡ 49, ಕಲಬುರಗಿ 33, ಬಳ್ಳಾರಿ ಹಾಗೂ ಗದಗದಲ್ಲಿ 24, ಧಾರವಾಡ 19, ಬೀದರ 17, ಉಡುಪಿ, ಹಾಸನ ಹಾಗೂ ಕೋಲಾರದಲ್ಲಿ ತಲಾ 14, ಯಾದಗಿರಿ, ಶಿವಮೊಗ್ಗ, ತುಮಕೂರು ಹಾಗೂ ಚಾಮರಾಜನಗರದಲ್ಲಿ ತಲಾ 13, ಮಂಡ್ಯ ಹಾಗೂ ಮೈಸೂರು 12, ಕೊಡಗು 9, ರಾಯಚೂರು ಹಾಗೂ ದಾವಣಗೆರೆಯಲ್ಲಿ ತಲಾ 6, ಬೆಂಗಳೂರು ಗ್ರಾಮಾಂತರ 5, ಉತ್ತರಕನ್ನಡ, ಬಾಗಲಕೋಟೆ, ಚಿಕ್ಕಮಗಳೂರು ಹಾಗೂ ಚಿತ್ರದುರ್ಗದಲ್ಲಿ ತಲಾ 2, ಬೆಳಗಾವಿ, ಚಿಕ್ಕಬಳ್ಳಾಪುರ, ಕೊಪ್ಪಳ ಹಾಗೂ ಹಾವೇರಿಯಲ್ಲಿ ತಲಾ ಒಂದು ಹೀಗೆ ಒಟ್ಟು 28 ಜಿಲ್ಲೆಗಳಲ್ಲಿ ಕರೋನಾ ವೈರಸ್ ತನ್ನ ಅಟ್ಟಹಾಸ ಮೆರೆದಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಸಾವಿನ ರಣಕೇಕೆ ರಾಜ್ಯದಲ್ಲಿ ಶನಿವಾರವೂ ಮುಂದುವರೆದಿದ್ದು, ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ 3, ಕಲಬರುಗಿ 2, ಬೀದರ 3, ಧಾರವಾಡ, ಬಳ್ಳಾರಿ ಹಾಗೂ ಗದಗದಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.
ಬೆಂಗಳೂರಿನ ಪಿ-7204 ಸೋಂಕಿತ 83 ವರ್ಷದ ವೃದ್ದ, ಪಿ-8216 ಸೋಂಕಿತ 70 ವರ್ಷದ ವೃದ್ದ, ಪಿ-11148 ಸೋಂಕಿತ 74 ವರ್ಷದ ವೃದ್ದೆ, ಬೀದರ ಪಿ-7955 ಸೋಂಕಿತ 65 ವರ್ಷದ ವೃದ್ದ, ಪಿ -11437 ಸೋಂಕಿತ 65 ವರ್ಷದ ವೃದ್ದ, ಪಿ-11438 ಸೋಂಕಿತ 73 ವರ್ಷದ ವೃದ್ದೆ, ಕಲಬುರಗಿ ಪಿ-9833 ಸೋಂಕಿತ 72ವರ್ಷದ ವೃದ್ದ, ಪಿ-11278 ಸೋಂಕಿತ 50 ವರ್ಷದ ವ್ಯಕ್ತಿ, ಗದಗ ಪಿ-11231 ಸೋಂಕಿತ 95 ವರ್ಷದ ವೃದ್ದೆ, ಧಾರವಾಡ ಪಿ-11406 ಸೋಂಕಿತ 73 ವರ್ಷದ ವೃದ್ದ, ಬಳ್ಳಾರಿ ಪಿ-11322 ಸೋಂಕಿತ 75 ವರ್ಷದ ವೃದ್ದ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ ಎಂದು ವಿವರಿಸಲಾಗಿದೆ.