ಧಾರವಾಡ prajakiran.com : ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆಯನ್ನು ಧಾರವಾಡ ಹೈಕೋರ್ಟ್ ಜನೆವರಿ 20ಕ್ಕೆ ಮುಂದೂಡಿದೆ.
ಧಾರವಾಡ ಜಿಲ್ಲೆಯ ಬಿಜೆಪಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಗೌಡರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಬಂಧಿಸಿರುವ ಹಿನ್ನಲೆಯಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಈ ಹಿಂದೆ ಧಾರವಾಡ ಜಿಲ್ಲೆಯ ಮೂರನೇ ಅಧಿಕ ಹಾಗೂ ವಿಶೇಷ ಸಿಬಿಐ ನ್ಯಾಯಾಲಯದ ಮೊರೆ ಹೋಗಿದ್ದರು.
ಆದರೆ ನ್ಯಾಯಾಲಯ ವಾದ ಪ್ರತಿವಾದ ಆಲಿಸಿದ ಬಳಿಕ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು
ಈ ಹಿನ್ನೆಲೆಯಲ್ಲಿ ಅವರು ಜಾಮೀನು ಕೋರಿ ಧಾರವಾಡ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಧಾರವಾಡ ಹೈಕೋರ್ಟ್ ಎಕಸದಸ್ಯ ಪೀಠದ ನ್ಯಾಯಮೂರ್ತಿ ನಟರಾಜ್ ಅವರು ಬುಧವಾರ ಪ್ರಕರಣದ ಹೆಚ್ಚಿನ ವಿಚಾರಣೆ ಅಗತ್ಯವಿದೆ ಎಂದು ವಿಚಾರಣೆಯನ್ನು ಜ.20ಕ್ಕೆ ಮುಂದೂಡಿ ಆದೇಶ ಹೊರಡಿಸಿದರು.
ಈ ಹಿನ್ನೆಲೆಯಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಬೆಳಗಾವಿ ಜಿಲ್ಲೆಯ ಹಿಂಡಲಗಾ ಜೈಲಿನಲ್ಲಿಯೇ ಈ ಬಾರಿಯ ಸಂಕ್ರಾಂತಿ ಹಬ್ಬ ಆಚರಿಸಬೇಕಿದೆ.