ಬೆಂಗಳೂರು prajakiran. com : ಶಾಲಾ ಕಾಲೇಜುಗಳಲ್ಲಿ ತೀವ್ರ ವಿವಾದವನ್ನು ಸೃಷ್ಟಿಸಿದ್ದ ಹಿಜಾಬ್ ಪ್ರಕರಣದ ಅರ್ಜಿಯನ್ನು ವಜಾಗೊಳಿಸಿ ಕರ್ನಾಟಕದ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.
ಕಳೆದ ಹಲವು ದಿನಗಳಿಂದ ವಾದ ಪ್ರತಿವಾದವನ್ನು ಆಲಿಸಿದ ಹೈಕೋರ್ಟ್ ತ್ರಿಸದಸ್ಯ ಪೀಠ ಈ ಆದೇಶ ಹೊರಡಿಸಿದೆ.
ಹಿಜಾಬ್ ಇಸ್ಲಾಂ ನ ಅತ್ಯಗತ್ಯ ಭಾಗವಲ್ಲ. ಹೀಗಾಗಿ ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂದು ಕೋರಿ ಸಲ್ಲಿಸಿದ್ದ ಎಲ್ಲಾ ಅರ್ಜಿ ಗಳನ್ನು ವಜಾಗೊಳಿಸಿದೆ.
ಅಲ್ಲದೆ, ರಾಜ್ಯ ಸರ್ಕಾರದ ಸಮವಸ್ತ್ರ ಆದೇಶ ಕಾನೂನು ಬದ್ದವಾಗಿ ಎಂದು ಎತ್ತಿ ಹಿಡಿದಿದೆ.
ಆ ಮೂಲಕ ಶಾಲಾ ಕಾಲೇಜುಗಳ ತರಗತಿಯಲ್ಲಿ ಹಿಜಾಬ್ ಧರಿಸಿ ಕೂಡಲು ಅವಕಾಶ ನಿರಾಕರಿಸಿದೆ.
ಜೊತೆಗೆ ಉಡುಪಿ ಕಾಲೇಜಿಗೆ ಈ ಕುರಿತು ನಿರ್ದೇಶನ ನೀಡುವ ಅಗತ್ಯವಿಲ್ಲ ಎಂದು ಅಭಿಪ್ರಾಯ ಪಟ್ಟಿದೆ.