ಧಾರವಾಡ prajakiran.com : ಧಾರವಾಡ ಜಿಪಂ ಸದಸ್ಯ ಯೋಗೀಶ್ಗೌಡ ಗೌಡರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂದಿನ ಧಾರವಾಡ ಉಪನಗರ ಪೊಲೀಸ್ ಠಾಣೆಯ ಇನ್ಸಪೆಕ್ಟರ್
ಚೆನ್ನಕೇಶವ ಟಿಂಗರಿಕರ್ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ
ಧಾರವಾಡ ಹೈಕೋರ್ಟ್ ನಲ್ಲಿ ಸೋಮವಾರ ನಡೆಯಿತು.
ವಿಚಾರಣೆ ವೇಳೆ
ಸಿಬಿಐ ಪರ ವಕೀಲರಿಂದ ನಿರೀಕ್ಷಣಾ ಜಾಮೀನು ನೀಡದಂತೆ ಆಕ್ಷೇಪಣೆ ಸಲ್ಲಿಕೆಯಾಯಿತು.
ಜಾಮೀನು ನೀಡದಂತೆ ವಾದ ಮಂಡನೆ ಮಾಡಿದ ವಕೀಲರು
ಟಿಂಗರಿಕರ್ ಯೋಗೀಶಗೌಡ ಹತ್ಯೆಯ ತನಿಖಾಧಿಕಾರಿಯಾಗಿದ್ದರು.
ಹೀಗಾಗಿ ಅವರನ್ನು ವಿಚಾರಣೆ ನಡೆಸಬೇಕಿದೆ. ಅದಕ್ಕಾಗಿ ಅವರಿಗೆ
ನಿರೀಕ್ಷಣಾ ಜಾಮೀನು ನೀಡದಂತೆ ಕೋರ್ಟ್ ಗೆ ಮನವಿ ಮಾಡಿದರು.
ಆದರೆ ಟಿಂಗರಿಕರ್ ಅವರ ವಕೀಲರು ಸಿಬಿಐ ವಿಚಾರಣೆ ನಡೆಸಲು ಸಹಕಾರ ನೀಡಲಿದ್ದಾರೆ ಎಂದು ಮನವಿ ಮಾಡಿದರು.
ಎರಡೂ ಕಡೆ ವಕೀಲರ ವಾದ ಆಲಿಸಿದ ನ್ಯಾಯಾಲಯ
ಷರತ್ತುಗಳನ್ನು ವಿಧಿಸಿ, ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಧಾರವಾಡ ಹೈಕೋರ್ಟ್ ನಿಂದ ನಿರೀಕ್ಷಣಾ ಜಾಮೀನು ಮಂಜೂರು ಆಗಿರುವುದರಿಂದ
ಸಿಬಿಐ ನಿಂದ ಬಂಧನದ ಭೀತಿಯಲ್ಲಿದ್ದ ಟಿಂಗರಿಕರ್ ನೆಮ್ಮದಿ ನಿಟ್ಟುಸಿರು ಬಿಟ್ಟಿದ್ದಾರೆ.
ಅವರು ಕಳೆದ ಹಲವು ತಿಂಗಳಿಂದ ಅನಾರೋಗ್ಯದ ರಜೆ ಮೇಲಿದ್ದರು.ಅವರು ಕೊಲೆ ಪ್ರಕರಣದ ಸಾಕ್ಷಿ ನಾಶದ ಆರೋಪ ಎದುರಿಸುತ್ತಿದ್ದಾರೆ.
ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಧಾರವಾಡ ಜಿಲ್ಲೆಯ ಮೂರನೇ ಹೆಚ್ಚುವರಿ ಹಾಗೂ
ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ವಜಾಗೊಂಡಿತ್ತು.
ಹೀಗಾಗಿ ಅವರು
ಹೈಕೋರ್ಟ್ ಮೊರೆ ಹೋಗಿದ್ದನ್ನು ಇಲ್ಲಿ ಸ್ಮರಿಸಬಹುದು.