ಅಂತಾರಾಷ್ಟ್ರೀಯ

ಮಾಜಿ ಸಚಿವ ವಿನಯ ಕುಲಕರ್ಣಿ ಅರ್ಜಿ ವಜಾಗೊಳಿಸಿದ ಬೆಂಗಳೂರು ಹೈಕೋರ್ಟ್

ಬೆಂಗಳೂರು prajakiran.com : ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯತ ಕ್ಷೇತ್ರದ ಬಿಜೆಪಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ತಮ್ಮ ವಿರುದ್ಧ ಸಿಬಿಐ ದಾಖಲಿಸಿರುವ ಪ್ರಕರಣ ರದ್ದು ಕೋರಿ ಸುಪ್ರೀಂ ಕೋರ್ಟ್ ಎದುರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ ಎರಡು ತಿಂಗಳ ಒಳಗೆ ಇರ್ತಥ್ಯಗೊಳಿಸುವಂತೆ ಸೂಚಿಸಿದ್ದ ಹಿನ್ನೆಲೆಯಲ್ಲಿ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರು ಹೈಕೋರ್ಟ್ ವಿಶೇಷ ಪೀಠ ಮಾಜಿ ಸಚಿವ ವಿನಯ ಕುಲಕರ್ಣಿ ಅರ್ಜಿಯನ್ನು ವಜಾಗೊಳಿಸಿ, ಸಿಬಿಐ ತನಿಖೆ ಎದುರಿಸುವಂತೆ ಸೂಚಿಸಿ ಮಹತ್ವದ ಆದೇಶ ಹೊರಡಿಸಿದೆ.

ಬೆಂಗಳೂರು ಹೈಕೋರ್ಟ್
ವಿಶೇಷ ದ್ವಿಸದಸ್ಯ ಪೀಠದ ನ್ಯಾಯಮೂರ್ತಿಗಳಾದ ವೀರಪ್ಪ ಹಾಗೂ ಸಂಜಯಗೌಡ ಅವರು ಸಿಬಿಐ ಹಾಗೂ ರಾಜ್ಯ ಸರ್ಕಾರದ ವಾದವನ್ನು ಪುರಸ್ಕರಿಸಿದೆ.

ಸಿಬಿಐ ಹಾಗೂ ರಾಜ್ಯ ಸರ್ಕಾರದ ಪರ ಕೇಂದ್ರ ಸರ್ಕಾರದ ಸಾಲಿಸೇಟರ್ ಜನರಲ್ ತುಷಾರ ಮೆಹ್ತಾ ಅವರು ಸುದೀರ್ಘ ವಾದ ಮಂಡಿಸಿ ನ್ಯಾಯಾಲಯದ ಗಮನ ಸೆಳೆದಿದ್ದರು.

ಈಗಾಗಲೇ ಈ ಪ್ರಕರಣದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿಯನ್ನು ಕಳೆದ ವರ್ಷ ನ.5 ರಂದು ರಾಕೇಶ್ ರಂಜನ್ ನೇತೃತ್ವದ ಸಿಬಿಐ ಅಧಿಕಾರಿಗಳ ತಂಡ ಬಂಧಿಸಿ, ಬೆಳಗಾವಿ ಜಿಲ್ಲೆಯ ಹಿಂಡಲಗಾ ಜೈಲು ಸೇರಿದ ಒಂಬತ್ತು ತಿಂಗಳ ನಂತರ ಸುಪ್ರೀಂ ಕೋರ್ಟ್ ಷರತ್ತು ಬದ್ದ ಜಾಮೀನು ನೀಡಿ ಧಾರವಾಡ ಜಿಲ್ಲೆ ಪ್ರವೇಶಿಸದಂತೆ ಆದೇಶ ಹೊರಡಿಸಿದ್ದನ್ನು ಇಲ್ಲಿ ಸ್ಮರಿಸಬಹುದು

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *