ರಾಜ್ಯ

ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾದ ಆಡಳಿತಾಧಿಕಾರಿ ನೇಮಕ ತಡೆ ಹಿಡಿದ ರಾಜ್ಯ ಸರ್ಕಾರ

ಧಾರವಾಡ ಪ್ರಜಾಕಿರಣ.ಕಾಮ್ : ಭಾರತ ಸರ್ಕಾರದ ಘನತೆವೆತ್ತ‌ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಧಾರವಾಡದ ದಕ್ಷಿಣ ಭಾರತದ ಹಿಂದಿ ಪ್ರಚಾರ ಸಭಾದ ಆಡಳಿತಾಧಿಕಾರಿಯ ನೇಮಖಾತಿಯನ್ನು ಸರ್ಕಾರ ತಡೆಹಿಡಿದಿದೆ.

ಹೈಕೋರ್ಟನಲ್ಲಿ ಧಾರವಾಡದ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾದ ಆಡಳಿತಾಧಿಕಾರಿ ನೇಮಕ ಪ್ರಕರಣ ನ್ಯಾಯಾಲಯದಲ್ಲಿ ಬಾಕಿ ಇರುವ ಕಾರಣ ರಾಜ್ಯ ಸರ್ಕಾರ ಈಗಾಗಲೇ ಹೊರಡಿಸಿದ್ದ ಆದೇಶವನ್ನು ತಡೆಹಿಡಿದು ಆಗುವ ಮುಜುಗುರವನ್ನು ತಪ್ಪಿಸಿಕೊಂಡಂತೆ ಆಗಿದೆ.

ರಾಜ್ಯ ಸರ್ಕಾರದ ಸಹಕಾರ ಇಲಾಖೆ ಅಧೀನ ಕಾರ್ಯದರ್ಶಿ ರಂಗನಾಥ ಜಿ ಅವರು ಈ ಅಧಿಕೃತ ಆದೇಶ ಹೊರಡಿಸಿದ್ದು, ಆಡಳಿತಾಧಿಕಾರಿಯನ್ನು ತಡೆ ಹಿಡಿದಿದಕ್ಕೆ ಕಾರಣ ಕೊಟ್ಟಿದ್ದಾರೆ.

28-12-2023 ರಂದು ಸರ್ಕಾರ ಆಡಳಿತಾಧಿಕಾರಿ ನೇಮಕ ಮಾಡಿತ್ತು. ಮಾನ್ಯ ಸರ್ವೋಚ್ಚ ನ್ಯಾಯಾಲಯದ SLP(C) ಡೈರಿ ಸಂಖ್ಯೆ 1605/2023 ಪ್ರಕರಣದ ಆದೇಶದ ಪ್ಯಾರಾ ಸಂಖ್ಯೆ 9 ರಂತೆ ಮಾನ್ಯ ಉಚ್ಚ ನ್ಯಾಯಾಲಯದಲ್ಲಿ ದಾಖಲಾಗಿರುವ W.A.No 10064/2023 C/W. WA No.100165/2023 ಪ್ರಕರಣವು ವಿಚಾರಣೆ ಹಂತದಲ್ಲಿದೆ.

ಆಡಳಿತಾಧಿಕಾರಿಗೆ ಸಂಬಂಧಿಸಿದಂತೆ ಹೈಕೋರ್ಟನಲ್ಲಿ ನ್ಯಾಯಾಂಗ ನಿಂದನೆ ಅರ್ಜಿಯ ಪ್ರಕರಣ ವಿಚಾರಣೆ ಹಂತದಲ್ಲಿರುವ ಕಾರಣ ಸರ್ಕಾರ ಎಚ್ಚೆತ್ತುಕೊಂಡು ಈ ನಿರ್ಧಾರ ಮಾಡಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *