ಜಿಲ್ಲೆ

ದಕ್ಷಿಣ ಭಾರತ ಹಿಂದಿ ಪ್ರಚಾರ ಸಭೆ ಮಾಜಿ  ಖಜಾಂಚಿ ಗಂಗಾಧರಮಠ ನಿಧನ

ಧಾರವಾಡ prajakiran.com : ಇಲ್ಲಿಯ ಪ್ರತಿಷ್ಠಿತ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭೆಯ ಮಾಜಿ ಖಜಾಂಚಿ, ರಾಜ್ಯ ಸರಕಾರದ ಲೋಕೋಪಯೋಗಿ ಇಲಾಖೆಯ ನಿವೃತ್ತ ಸಿವ್ಹಿಲ್ ಇಂಜನೀಯರ್ ವೀರಭದ್ರಯ್ಯ ಶಂಕ್ರೆಯ್ಯ ಗಂಗಾಧರಮಠ (೯೪) ಶನಿವಾರ ನಿಧನ ಹೊಂದಿದರು.

 ಲೋಕೋಪಯೋಗಿ ಇಲಾಖೆಯಲ್ಲಿ ಸಿವ್ಹಿಲ್ ಇಂಜನೀಯರ್ ಆಗಿ ಶ್ಲಾö್ಯಘನೀಯ ಕಾರ್ಯಮಾಡಿ ಸಿವ್ಹಿಲ್ ಕಾಮಗಾರಿಗಳ ನಿರ್ವಹಣೆಗೆ ತಮ್ಮದೇ ಆದ ಹೊಸ ಚಿಂತನೆಗಳನ್ನು ಅಳವಡಿಸುವಲ್ಲಿ ಯಶಸ್ವಿಯಾಗಿದ್ದರು. ನಿವೃತ್ತಿಯ ನಂತರ ನಗರದ ಪ್ರತಿಷ್ಠಿತ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭೆಯಲ್ಲಿ ಸುಮಾರು ೩೦ ವರ್ಷಗಳ ಕಾಲ ಗೌರವ ಖಜಾಂಚಿಯಾಗಿ ಸೇವೆಸಲ್ಲಿಸಿ ಪಾರದರ್ಶಕ ಆಡಳಿತ ನೀಡಿದ್ದರು.

ಇಬ್ಬರು ಪುತ್ರರು, ಓರ್ವ ಪುತ್ರಿ, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧುಗಳನ್ನು ಅವರು ಅಗಲಿದ್ದಾರೆ. ಬಾಳೆಹೊನ್ನೂರಿನ ಶ್ರೀರಂಭಾಪುರಿ ಪೀಠದ ಜಗದ್ಗುರು ಡಾ.ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು, ತಾಲೂಕಿನ ಅಮ್ಮಿನಬಾವಿ ಪಂಚಗೃಹ ಹಿರೇಮಠದ ಹಿರಿಯಶ್ರೀ ಶಾಂತಲಿಂಗ ಶಿವಾಚಾರ್ಯ ಸ್ವಾಮಿಗಳು, ಕಿರಿಯಶ್ರೀ ಅಭಿನವ ಶಾಂತಲಿಂಗ ಶಿವಾಚಾರ್ಯ ಸ್ವಾಮಿಗಳು, ಚಿಕ್ಕಮಗಳೂರು ಜಿಲ್ಲೆ ಬೇರುಗಂಡಿ ಬೃಹನ್ಮಠದ ಶ್ರೀರೇಣುಕ ಶಿವಾಚಾರ್ಯ ಸ್ವಾಮಿಗಳು, ಮಾಜಿ ಮೇಯರ್ ಶಿವು ಹಿರೇಮಠ, .ಪಿ.ಎಂ.ಸಿ. ಸದಸ್ಯ ಬಸವರಾಜ ವಸ್ತ್ರದ ಅವರು ವ್ಹಿ. ಎಸ್. ಗಂಗಾಧರಮಠ ಅಗಲಿಕೆಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *