ಧಾರವಾಡ prajakiran.com : ಧಾರವಾಡದ ನುಗ್ಗಿಕೇರಿ ಗಲಾಟೆ ಹಿನ್ನೆಲೆಯಲ್ಲಿ ಹಿಂದೂಪರ ಸಂಘಟಕರಿಂದ ಧಾರವಾಡ ಗ್ರಾಮೀಣ ಠಾಣೆಗೆ ಮುತ್ತಿಗೆ ಯತ್ನ ನಡೆಯಿತು.
ಆದರೆ ಕಾರ್ಯಕರ್ತರನ್ನು ಗೇಟ್ ಬಳಿ ಪೊಲೀಸರು ತಡೆದರು.20ಕ್ಕೂ ಹೆಚ್ಚು ಕಾರ್ಯಕರ್ತರಿಂದ ಮುತ್ತಿಗೆ ಯತ್ನ ನಡೆಯಿತು.
ಈ ವೇಳೆ ಪೊಲೀಸರು ಮತ್ತು ಕಾರ್ಯಕರ್ತರ ಮಧ್ಯೆ ವಾಗ್ವಾದ ನಡೆಯಿತು. ನಂತರ ಎಲ್ಲರನ್ನು ಸಮಾಧಾನ ಪಡಿಸಲಾಯಿತು.
ನುಗ್ಗಿಕೆರಿಯಲ್ಲಿ ನಡೆದ ಗಲಾಟೆಯಲ್ಲಿ,ಹಿಂದೂ ಕಾರ್ಯಕರ್ತರನ್ನು ಅರೆಸ್ಟ್ ಮಾಡಿ,ನಾನ್ ಬೆಲೇಬೇಲ್ ಕೇಸ್ ಹಾಕಿದ್ದು ತಪ್ಪು ಎಂದು ಧಾರವಾಡ ವಿಶ್ವಹಿಂದು ಪರಿಷದ್, ಬಜರಂಗದಳ ಹಾಗೂ ಹಿಂದೂ ಜಾಗರಣೆ ವೇದಿಕೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಬಳಿಕ ಡಿವೈಎಸ್ಪಿ ಮುಖಾಂತರ ಎಸ್ಪಿ ಅವರಿಗೆ ಮನವಿ ಸಲ್ಲಿಸಿ ಸುಳ್ಳು ಪ್ರಕರಣ ಕೈ ಬಿಡಬೇಕು ಎಂದು ಆಗ್ರಹಿಸಿದರು.
ತದನಂತರ ನುಗ್ಗಿಕೇರಿ ಹನುಮಾನ ಮಂದಿರಕ್ಕೆ ಭೇಟಿ ಕೊಟ್ಟು,ಟ್ರಸ್ಟ್ ಕಮಿಟಿ ಅವರಿಗೆ ಹಿಂದು ದೇವಸ್ಥಾನದಲ್ಲಿ ಮುಸ್ಲಿಂರಿಗೆ ವ್ಯಾಪಾರಕ್ಕೆ ಅವಕಾಶ ಕೊಡಬಾರದು ಅಂತಾ ವಿನಂತಿ ಮಾಡಲಾಯಿತು.
ಕಮಿಟಿ ಅವರು ಮೀಟಿಂಗ್ ಮಾಡಿ ಮುಂದಿನ ತೀರ್ಮಾನ ಕೈಗೊಳುತ್ತೇವೆ ಅಂತ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯ ಶಂಕರ ಶೆಳಕೆ, ಬಿಜೆಪಿ ಮುಖಂಡ ರಾಕೇಶ ನಾಜರೆ, ಹಿಂದೂ ಸಂಘಟನೆ ಮುಖಂಡ ಶಿವಾನಂದ ಸತ್ತಿಗೇರಿ, ಜಯತೀರ್ಥ ಮಳಗಿ, ವಿಜಯ ಕೊಳ್ಳಾನಟ್ಟಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು