ಧಾರವಾಡ prajakiran.com : ಮನೆಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ವ್ಯಕ್ತಿಯೊಬ್ಬ ಸಜೀವ ಸುಟ್ಟು ಕರಕಲು ಆದ ಹೃದಯ ವಿದ್ರಾವಕ ಘಟನೆ ಧಾರವಾಡದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ನಗರೇಶ್ವರ ದೇವಸ್ಥಾನದ ಬಳಿಯ ಅಡಿಕೆ ಓಣಿ ನಿವಾಸಿ 35 ವಯಸ್ಸಿನ ವಿನಾಯಕ್ ಚಿನಿವಾಲ ಎಂಬಾತನೇ ಸಜೀವ ದಹನವಾದ ವ್ಯಕ್ತಿ ಎಂದು ಗುರುತಿಸಲಾಗಿದೆ.
ಮೇಣದ ಬತ್ತಿ ಹಾಸಿಗೆ ಮೇಲೆ ಬಿದ್ದ ಕಾರಣ ಬೆಂಕಿ ಹತ್ತಿಕೊಂಡಿದೆ. ಇತ ಕುಡಿದ ಮತ್ತಿನಲ್ಲಿದ್ದ ಹೀಗಾಗಿ ಅವಘಡ ಗೊತ್ತಾಗಿಲ್ಲ ಎಂದು ಹೇಳಲಾಗುತ್ತಿದೆ.
ಆಕಸ್ಮಿಕ ಬೆಂಕಿ ತಗುಲಿದ
ಮಾಹಿತಿ ಅರಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಮುಂದಿನ ಕ್ರಮ ಜರುಗಿಸಿದರು.
ಈ ಕುರಿತು ಧಾರವಾಡ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.