ರಾಜ್ಯ

ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರಗೆ ಗೃಹ ಸಚಿವ ಬೊಮ್ಮಾಯಿ ಕ್ಲಾಸ್

ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಗರಂ

ಹುಬ್ಬಳ್ಳಿ prajakiran.com : ಹುಬ್ಬಳ್ಳಿ- ಧಾರವಾಡದಲ್ಲಿ ಸರಣಿ ಕೊಲೆಗಳ ವಿಚಾರ ಹಾಗೂ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದಕ್ಕೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಗರಂ ಆಗಿದ್ದಾರೆ.

ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಆರ್. ದಿಲೀಪ್ ಅವರನ್ನು ಹುಬ್ಬಳ್ಳಿಯ ತಮ್ಮ ಮನೆಗೆ ಕರೆಸಿಕೊಂಡು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಕ್ಲಾಸ್ ತೆಗೆದುಕೊಂಡಿದ್ದಾರೆ.

ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಆರ್. ದಿಲೀಪ್ ವಿರುದ್ಧ ಸಚಿವರು ತಮ್ಮಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಏನೇ ನಡೆದ್ರು ನೀವೇ ಹೊಣೆ ಎಂದು ಹೇಳಿದ್ದಾರೆ. ಅಲ್ಲದೆ, ಮನೆಯಲ್ಲಿ ಕೂತರೆ ಕ್ರೈಂ ಕಂಟ್ರೋಲ್ ಗೆ ಬರಲ್ಲ.

ಕಚೇರಿಯಲ್ಲಿ ಕುಳಿತು ಕೆಲಸ ಮಾಡೋದು ಬಿಟ್ಟು ಫೀಲ್ಡ್ ಗೆ ಇಳಿಯುವಂತೆ ಕಡಕ್ ಸೂಚನೆ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಶೂಟೌಟ್, ಡಬಲ್ ಮರ್ಡರ್ ನಿರಂತರವಾಗಿ ನಡೆಯುತ್ತಿವೆ ಎಂದು ಅಸಮಾಧಾನ ಹಾಕಿದರು.

ಒಂದು ವಾರದಲ್ಲಿ ಕಾನೂನು ಸುವ್ಯವಸ್ಥೆ ಕಂಟ್ರೋಲ್ಗೆ ಬರಬೇಕು ಎಂದು  ಕಮಿಷನರಗೆ ಖಡಕ್ ಸೂಚನೆ ನೀಡಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *