ಧಾರವಾಡ prajakiran.com :
ಕರೋನ ವೈರಸ್ ಭೀತಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲಾಕ್ ಡೌನ್ ಇಲ್ಲ ಎಂದು
ಧಾರವಾಡದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಕೊರೊನಾ ಲಾಕ್ ಡೌನ್ ವಿಚಾರವಾಗಿ ಬಗ್ಗೆ ಚರ್ಚೆ ಮಾಡಿಲ್ಲ,ರಾಜ್ಯದಲ್ಲಿ ಶಾಲಾ ಕಾಲೇಜುಗಳನ್ನ ಬಂದ ಮಾಡುವುದಿಲ್ಲ.
ಆಯಾ ರಾಜ್ಯದಲ್ಲಿ ಕೊರೊನಾ ಬಗ್ಗೆ ಅವರು ಕ್ರಮಗಳನ್ನ ಕೈಗೊಂಡಿದ್ದಾರೆ,
ನಮ್ಮ ರಾಜ್ಯದಲ್ಲಿ ಸದ್ಯಕ್ಕೆ ಲಾಕ್ ಡೌನ್ ಬಗ್ಗೆ ತಜ್ಞರು ಚರ್ಚೆ ಮಾಡುತ್ತಿದ್ದಾರೆ.
ಆದರೆ,ಕೊರೊನಾ ನಿಯಂತ್ರಣ ಮಾಡಬೇಕು ಎಂಬ ವಿಚಾರದಲ್ಲಿ ಸರಕಾರ ಕ್ರಮ ಕೈಗೊಂಡಿದೆ ಎಂದರು.
ಉಪ ಚುನಾವಣೆಯಲ್ಲಿ
ಎರಡು ವಿಧಾನಸಭಾ ಹಾಗೂ ಒಂದು ಲೋಕಸಭೆಯಲ್ಲಿ ಬಿಜೆಪಿ ಗೆಲ್ಲುತ್ತೆ ಎಂದರು.
ಎಸ್ ಐ ಟಿ ಸಿಎಂ, ಗೃಹ ಸಚಿವರ ಕೈಯಲ್ಲಿ ಕೆಲಸ ಮಾಡುತ್ತೆ ಎಂಬ ಯತ್ನಾಳ ಹೇಳಿಕೆ ವಿಚಾರವಾಗಿ ಖಾರವಾಗಿ ಪ್ರತಿಕ್ರಿಯಿಸಿದರು.
2016 ರಲ್ಲಿ ಸಚಿವರೊಬ್ಬರ ಸಿಡಿ ಪ್ರಕರಣ ನಡೆದಿತ್ತು,.ಆ ಸಮಯದಲ್ಲಿ ರಾಜ್ಯ ಸರಕಾರ ಎಸ್ ಐ ಟಿ ವಿಚಾರಣೆ ಮಾಡಿತ್ತು,
ಯಾವಾಗಲೂ ಪೋಲಿಸರು ಕಾನೂನು ಪ್ರಕಾರ ವಿಚಾರಣೆ ಮಾಡುತ್ತಿದ್ದಾರೆ.
ಎಸ್ ಐ ಟಿ ಯನ್ನ ಸ್ವತಂತ್ರವಾಗಿ ಬಿಟ್ಟಿದ್ದೆವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ವಿವರಿಸಿದರು.