ಅಪರಾಧ

ಧಾರವಾಡದಲ್ಲಿ ಕೀಲಿ ಮುರಿದು ಮನೆಯಲ್ಲಿನ ನಗ-ನಾಣ್ಯ ಕಳ್ಳತನ

ಧಾರವಾಡ prajakiran.com : ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಕೀಲಿ ಮುರಿದು ನಗ ಮತ್ತು ಚಿನ್ನದ ಆಭರಣ ಕಳ್ಳತನ ಮಾಡಿದ ಘಟನೆ ಧಾರವಾಡದ ಮದಾರಮಡ್ಡಿ ಕಟಕಕರ ಓಣಿಯಲ್ಲಿ ನಡೆದಿದೆ.

ಶಹನಾಜ್ ಬದಾಮಿ ಎಂಬುವರ ಮನೆಯಲ್ಲಿ ಈ ಕಳ್ಳತನ ನಡೆದಿದ್ದು, ರಾಡ್‌ನಿಂದ ಮನೆಯ ಕೀಲಿ ಮುರಿದು ೪೦ ಸಾವಿರ ರೂಪಾಯಿ ನಗದು, ೧೨ ಗ್ರಾಂ.ನಷ್ಟು ಚಿನ್ನದ ಆಭರಣಗಳನ್ನು ಕಳ್ಳತನ ಮಾಡಲಾಗಿದೆ.

ಶಹನಾಜ್ ಬದಾಮಿಯವರು ಊರಿಗೆ ಹೋದಾಗ ಈ ಕಳ್ಳತನ ನಡೆದಿದ್ದು, ನಿನ್ನೆ ವಾಪಸ್ಸು ಬಂದಾಗ ಕಳ್ಳತನವಾಗಿದ್ದು ಗೊತ್ತಾಗಿದೆ.

ಘಟನಾ ಸ್ಥಳಕ್ಕೆ ಧಾರವಾಡ ಶಹರ ಠಾಣೆಯ ಇನ್ಸಪೆಕ್ಟರ್ ಸಂಗಮೇಶ ದಿಡಿಗಿನಾಳ, ಬೆರಳಚ್ಚು ತಜ್ಞರು, ಶ್ವಾನ ದಳ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಕುರಿತು ಧಾರವಾಡ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರೆದಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *