ಧಾರವಾಡ prajakiran.com : ಧಾರವಾಡ ತಾಲೂಕಿನ ಬೋಗೂರು ಗ್ರಾಮದಲ್ಲಿ ನಿನ್ನೆ ತಡರಾತ್ರಿ ಮಳೆಯ ಹೊಡೆತಕ್ಕೆ ಮನೆಯ ಗೋಡೆಯೊಂದು ಕುಸಿದು ಬಿದ್ದು, ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಜಿಲ್ಲೆಯಲ್ಲಿ ಕಳೆದ ಮೂರುನಾಲ್ಕು ದಿನಗಳಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಗೆ ಹಲವಾರು ಕಡೆಗಳಲ್ಲಿ ಮನೆಗಳು ಕುಸಿದಿವೆ.
ನಿನ್ನೆ ರಾತ್ರಿ ಮಕ್ಕಳು ಮಲಗಿದ್ದ ವೇಳೆ ಮನೆಯ ಗೋಡೆ ಆ ಮಕ್ಕಳ ಮೇಲೆ ಕುಸಿದು ಬಿದ್ದಿದೆ. ಇದರಿಂದ 2 ವರ್ಷದ ವಿಶ್ವನಾಥ್ ಕುರಿ ಮತ್ತು 4 ವರ್ಷದ ಯಲ್ಲಪ್ಪ ಕುರಿ ಎಂಬ ಇಬ್ಬರು ಮಕ್ಕಳಿಗೆ ಗಾಯಗಳಾಗಿವೆ.
ಇಬ್ಬರು ಮಕ್ಕಳ ಪೈಕಿ 4 ವರ್ಷದ ವಿಶ್ವನಾಥ್ ನನ್ನು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೋಬ್ಬ ಬಾಲಕನಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಸ್ಥಳಕ್ಕೆ ಗ್ರಾಮ ಲೆಕ್ಕಾಧಿಕಾರಿ ಭೇಟಿ ನೀಡಿ, ಪರಿಶೀಲನೆ ನಡೆಸಿದರು.