ಹುಬ್ಬಳ್ಳಿ prajakiran.com :
ಹನಿ ಟ್ರ್ಯಾಪ್ ಪ್ರಕರಣದಲ್ಲಿ
ಯುವತಿ ಸೇರಿ ನಾಲ್ವರು ಆರೋಪಿಗಳಿಗೆ ಹುಬ್ಬಳ್ಳಿ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿದೆ.
ಹುಬ್ಬಳ್ಳಿಯ ೫ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಈ ಮಹತ್ವದ ಆದೇಶ ಹೊರಡಿಸಿದೆ.
ನ್ಯಾಯಾಧೀಶರಾದ ಕೆ.ಎನ್ ಗಂಗಾಧರ ಅವರು ಈ ಆದೇಶ ಹೊರಡಿಸಿದ್ದಾರೆ.
ಯುವತಿ ಅನಗಾ ವಡವಿ ಹಾಗೂ ಆಕೆಯ ಸ್ನೇಹಿತರಾದ ಗಣೇಶ ಶೆಟ್ಟಿ, ರಮೇಶ್ ಹಜಾರೆ, ವಿನಾಯಕ್ ಹಜಾರೆಗೆ ಜೀವಾವಧಿ ಶಿಕ್ಷೆ ವಿಧಿಸಿದೆ.
ಇವರು ಹನಿಟ್ರ್ಯಾಪ್ ಪ್ರಕರಣದಲ್ಲಿ ವ್ಯಕ್ತಿಯನ್ನು ಅಪಹರಿಸಿ, ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿಗಳಾಗಿದ್ದಾರೆ.
ಹಣ ನೀಡದಿದ್ದಾಗ, ಆತನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಆತನ ಎಟಿಎಮ್ ಕಾರ್ಡ್ನಿಂದ ಹಣ ಡ್ರಾ ಮಾಡಿದ್ದ ಕಿರಾತಕರು.
ಯುವತಿ ಮೂಲಕ ವ್ಯಕ್ತಿಯನ್ನು ಬಲೆಗೆ ಕೆಡವಿ- ಏಕಾಂತ ಜಾಗಕ್ಕೆ ಕರೆದುಕೊಂಡು ಹೋಗಿದ್ದ ಆರೋಪ ಈ ಗ್ಯಾಂಗ್ ಮೇಲಿದೆ.
ಅಲ್ಲಿ ಯುವತಿ ಜೊತೆ ಮಾತನಾಡುತ್ತಿದ್ದಾಗ ವ್ಯಕ್ತಿಯನ್ನು ಬೆದರಿಸಿ, ಅಪಹರಿಸಿ ಬ್ಲ್ಯಾಕ್ ಮೇಲೆ ಮಾಡಿತ್ತು ಈ ಗ್ಯಾಂಗ್.
ಧಾರವಾಡ ನಿವಾಸಿಯಾಗಿರುವ ಅನಗಾ ವಡವಿ ಗಾಯಕಿಯಾಗಿ ಗುರುತಿಸಿಕೊಂಡಿದ್ದರು.
ಇವರು ಶ್ರೀಮಂತ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಅವರೊಂದಿಗೆ ಸಲುಗೆಯನ್ನು ಬೆಳೆಸಿ ಹನಿಟ್ರ್ಯಾಪ್ ಮಾಡಿ ಹಣವನ್ನು ಕಿತ್ತುಕೊಳ್ಳುತ್ತಿದ್ದ ಆರೋಪ ಸಾಬೀತಾಗಿದೆ.
ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿತರಾದ ಗಣೇಶ ಶೆಟ್ಟಿ, ಆನಗಾ ವಡವಿ, ರಮೇಶ ಹಜಾರೆ ಹಾಗೂ ವಿನಾಯಕ ಹಜಾತೆ ಅವರಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ 10,000 ರೂ. ದಂಡ ವಿಧಿಸಿದೆ.
ತಪ್ಪಿದಲ್ಲಿ ಮೂರು ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ನೀಡಿ ತೀರ್ಪು ನೀಡಿದೆ.
ಸರ್ಕಾರದ ಪರವಾಗಿ ವಾದವನ್ನು ಶ್ರೀಮತಿ ಸುಮಿತ್ರಾ ಎಂ. ಅಂಚಟಗೇರಿ ಮಂಡಿಸಿದರು.