ರಾಜ್ಯ

ಜೆಡಿಎಸ್, ಬಿಜೆಪಿ ಮೈತ್ರಿ ಕೇವಲ ಗಾಳಿ ಸುದ್ದಿ ಎಂದ ಹೊರಟ್ಟಿ

ಹುಬ್ಬಳ್ಳಿ prajakiran.com : ಜೆಡಿಎಸ್ ಬಿಜೆಪಿ ಮೈತ್ರಿ ಅನ್ನೋದು ಕೇವಲ ಗಾಳಿಸುದ್ದಿ ಅಷ್ಟೇ‌ ಎಂದು ವಿಧಾನ ಪರಿಷತ್ ಹಿರಿಯ ಸದಸ್ಯ ಬಸವರಾಜ್ ಹೊರಟ್ಟಿ ತಿಳಿಸಿದರು.

ಅವರು ಗುರುವಾರ ನಗರದಲ್ಲಿ ಸುದ್ದಿ ಗೋಷ್ಠಿ ಯಲ್ಲಿ ಮಾತನಾಡಿದರು.

ಪರಿಷತ್ ಸಭಾಪತಿ ಆಯ್ಕೆಯನ್ನ ಜೆಡಿಎಸ್ ನವರನ್ನ ಬಿಟ್ಟು ಯಾವ ಪಕ್ಷದವರು ಮಾಡಲು ಸಾಧ್ಯವಿಲ್ಲ ಎಂದರು.

ಬಸವರಾಜ ಹೊರಟ್ಟಿಯವರು ಪರಿಷತ್ ಸಭಾಪತಿ ಆಗುವುದಕ್ಕೆ ಮೂರು ಪಕ್ಷದಿಂದ ಸಹಮತವಿದೆ. ನಾನು ಹಿರಿಯ ಸದಸ್ಯ ಎನ್ನುವ ಕಾರಣಕ್ಕೆ ಅವಿರೋಧ ಆಯ್ಕೆಗೆ ಮೂರು ಪಕ್ಷದವರು ಸಹಮತ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.

ಜೆಡಿಎಸ್ ವರಿಷ್ಠ ಹೆಚ್. ಡಿ ದೇವೆಗೌಡರು ನನ್ನನ್ನ ಸಭಾಪತಿ ಮಾಡುವ ವಿಚಾರವಾಗಿ ಮಾತುಕತೆ ನಡೆಸಿದ್ದಾರೆ ಎನ್ನುವುದನ್ನ ಕೇಳಿದ್ದೇನೆ.

ಪರಿಷತ್ ಸಭಾಪತಿಯನ್ನ ಕೆಳಗಿಳಿಸುವಾಗ ಬಿಜೆಪಿ ಜೊತೆಗೆ ಹೊಂದಾಣಿಕೆ ಆಗಿತ್ತು ಎಂದರು.

ನಾನು ಸಭಾಪತಿಯಾಗುವುದಕ್ಕೆ ಶೇ 90 ರಷ್ಡು ಸದಸ್ಯರ ಸಹಮತವಿದೆ. ಇದು ನನ್ನದು ಕೊನೆಯ ಅವಧಿ ಅಲ್ಲ
ಮತ್ತೆ ಚುನಾವಣೆಗೆ ಸ್ಪರ್ಧೆ ಮಾಡಲಿದ್ದೇನೆ ಎಂದು ಹೊರಟ್ಟಿ ವಿವರಿಸಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *