ಹುಬ್ಬಳ್ಳಿ prajakiran.com : ಜೆಡಿಎಸ್ ಬಿಜೆಪಿ ಮೈತ್ರಿ ಅನ್ನೋದು ಕೇವಲ ಗಾಳಿಸುದ್ದಿ ಅಷ್ಟೇ ಎಂದು ವಿಧಾನ ಪರಿಷತ್ ಹಿರಿಯ ಸದಸ್ಯ ಬಸವರಾಜ್ ಹೊರಟ್ಟಿ ತಿಳಿಸಿದರು.
ಅವರು ಗುರುವಾರ ನಗರದಲ್ಲಿ ಸುದ್ದಿ ಗೋಷ್ಠಿ ಯಲ್ಲಿ ಮಾತನಾಡಿದರು.
ಪರಿಷತ್ ಸಭಾಪತಿ ಆಯ್ಕೆಯನ್ನ ಜೆಡಿಎಸ್ ನವರನ್ನ ಬಿಟ್ಟು ಯಾವ ಪಕ್ಷದವರು ಮಾಡಲು ಸಾಧ್ಯವಿಲ್ಲ ಎಂದರು.
ಬಸವರಾಜ ಹೊರಟ್ಟಿಯವರು ಪರಿಷತ್ ಸಭಾಪತಿ ಆಗುವುದಕ್ಕೆ ಮೂರು ಪಕ್ಷದಿಂದ ಸಹಮತವಿದೆ. ನಾನು ಹಿರಿಯ ಸದಸ್ಯ ಎನ್ನುವ ಕಾರಣಕ್ಕೆ ಅವಿರೋಧ ಆಯ್ಕೆಗೆ ಮೂರು ಪಕ್ಷದವರು ಸಹಮತ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.
ಜೆಡಿಎಸ್ ವರಿಷ್ಠ ಹೆಚ್. ಡಿ ದೇವೆಗೌಡರು ನನ್ನನ್ನ ಸಭಾಪತಿ ಮಾಡುವ ವಿಚಾರವಾಗಿ ಮಾತುಕತೆ ನಡೆಸಿದ್ದಾರೆ ಎನ್ನುವುದನ್ನ ಕೇಳಿದ್ದೇನೆ.
ಪರಿಷತ್ ಸಭಾಪತಿಯನ್ನ ಕೆಳಗಿಳಿಸುವಾಗ ಬಿಜೆಪಿ ಜೊತೆಗೆ ಹೊಂದಾಣಿಕೆ ಆಗಿತ್ತು ಎಂದರು.
ನಾನು ಸಭಾಪತಿಯಾಗುವುದಕ್ಕೆ ಶೇ 90 ರಷ್ಡು ಸದಸ್ಯರ ಸಹಮತವಿದೆ. ಇದು ನನ್ನದು ಕೊನೆಯ ಅವಧಿ ಅಲ್ಲ
ಮತ್ತೆ ಚುನಾವಣೆಗೆ ಸ್ಪರ್ಧೆ ಮಾಡಲಿದ್ದೇನೆ ಎಂದು ಹೊರಟ್ಟಿ ವಿವರಿಸಿದರು.