ರಾಜ್ಯ

ತೆನೆ ಭಾರ ಇಳಿಸಿ ಶೀಘ್ರದಲ್ಲಿಯೇ ಬಿಜೆಪಿ ಸೇರುವೆ ಎಂದ ಬಸವರಾಜ ಹೊರಟ್ಟಿ….!

ಹುಬ್ಬಳ್ಳಿ prajakiran. com :
ಜೆಡಿಎಸ್ ಪಕ್ಷ ತೊರೆದು ಶೀಘ್ರದಲ್ಲೇ ಭಾರತೀಯ ಜನತಾ ಪಕ್ಷವನ್ನು ಸೇರುವುದಾಗಿ ವಿಧಾನ ಸಭಾ ಸ್ಪೀಕರ್ ಬಸವರಾಜ ಹೊರಟ್ಟಿ ತಿಳಿಸಿದರು.

ಅವರು ಭಾನುವಾರ ಹುಬ್ಬಳ್ಳಿಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಈ ಬಾರಿಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಯಿಂದ ಸ್ಪರ್ಧಿಸುವುದಾಗಿ ಹೇಳಿದರು.

ನಮ್ಮ ಪಕ್ಷದಿಂದಲೇ ಸ್ಪರ್ಧಿಸುವಂತೆ ಬಿಜೆಪಿ ನಾಯಕರು ಹೇಳಿದ್ದಾರೆ.
ಆದರೆ, ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು
ನನ್ನೊಂದಿಗೆ ಮಾತನಾಡಿದ್ದಾರೆ ಎಂದರು.

ಅಲ್ಲದೆ, ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿಯವರು ಕೂಡ
ಈ ಬಗ್ಗೆ ಸಮ್ಮತಿ ವ್ಯಕ್ತಪಡಿಸಿದ್ದಾರೆ ಎಂದರು.

ವಿಧಾನ ಪರಿಷತ್ ಪಶ್ಚಿಮ ಶಿಕ್ಷಕರ ಮತಕ್ಷೇತ್ರದಿಂದ ಈಗಾಗಲೇ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಬಸವರಾಜ ಗುರಿಕಾರ ಹೆಸರು ಘೋಷಣೆಯಾಗಿದೆ.

ಬಿಜೆಪಿಯಿಂದ ಸ್ಪರ್ಧಿಸಲು ಅನೇಕರ ಹೆಸರು ಕೇಳಿಬಂದ ಬೆನ್ನ ಹಿಂದೆಯೇ ಬಸವರಾಜ ಹೊರಟ್ಟಿ ಅಖಾಡಕ್ಕೆ ಇಳಿಯುವುದಾಗಿ ಹೇಳಿರುವುದು ತೀವ್ರ ಕುತೂಹಲ ಕೆರಳಿಸಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *