ರಾಜ್ಯ

ಸಮಾಜ ಕಲ್ಯಾಣ, ಬಿಸಿಎಂ ಹಾಸ್ಟೆಲ್ ಮೇ.4 ರವರೆಗೆ ಸ್ಥಗಿತ….!

ಧಾರವಾಡ prajakiran.com: ಕೋವಿಡ್ ಹೆಚ್ಚಳದಿಂದಾಗಿ ಸೋಂಕು ನಿಯಂತ್ರಣಕ್ಕೆ ತರಲು‌ ರಾಜ್ಯ ಸರಕಾರ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಅದರ ಅನ್ವಯ ಜಿಲ್ಲೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆ ಅಧೀನದ ಎಲ್ಲ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ನಿರ್ವಹಣೆಯನ್ನು ಮೇ.4, ರವರಗೆ ಸ್ಥಗಿತಗೊಳಿಸಲು ಸಮಾಜ ಕಲ್ಯಾಣ ಇಲಾಖೆ ಆಯುಕ್ತರು ಆದೇಶ ಮಾಡಿದ್ದಾರೆ.

ಅವರ ನಿರ್ದೇಶನದಂತೆ ಮುಂದಿನ ಆದೇಶವಾಗುವವರೆಗೆ ವಸತಿನಿಲಯಗಳನ್ನು ಬಂದ್ ಮಾಡಲಾಗಿದೆ ಎಂದು ಜಂಟಿ ನಿರ್ದೇಶಕ ಎನ್.ಆರ್.ಪುರುಷೋತ್ತಮ ತಿಳಿಸಿದ್ದಾರೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ: ಮೇ.4 ರವರೆಗೆ ವಿದ್ಯಾರ್ಥಿನಿಲಯಗಳ ನಿರ್ವಹಣೆ ಸ್ಥಗಿತ

ಕೋವಿಡ್ ಹೆಚ್ಚಳದಿಂದಾಗಿ ಸೋಂಕು ನಿಯಂತ್ರಣಕ್ಕೆ ತರಲು‌ ರಾಜ್ಯ ವಿಪತ್ತು ಪ್ರಾಧಿಕಾರದ ಅಧ್ಯಕ್ಷರು ಆಗಿರುವ ರಾಜ್ಯ ಮುಖ್ಯ ಕಾರ್ಯದರ್ಶಿಗಳು ಏ.20 ರಂದು ಹೊಸ ಮಾರ್ಗಸೂಚಿಗಳನ್ನು ಹೊರಡಿಸಿ ಶಾಲೆ, ಕಾಲೇಜು, ವಿದ್ಯಾರ್ಥಿನಿಲಯಗಳನ್ನು ಮೇ 4, ರವರೆಗೆ ಬಂದ್ ಮಾಡಲು ಸೂಚಿಸಿದ್ದಾರೆ.

ಅದರ ಅನ್ವಯ ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧೀನದ ಎಲ್ಲ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ನಿರ್ವಹಣೆಯನ್ನು ಏಪ್ರಿಲ್ 21 ರಿಂದ ಮೇ.4, ರವರಗೆ ಸ್ಥಗಿತಗೊಳಿಸಲು ಇಲಾಖೆ ಆಯುಕ್ತರು ಆದೇಶ ಮಾಡಿದ್ದಾರೆ.

ಅವರ ನಿರ್ದೇಶನದಂತೆ ಮುಂದಿನ ಆದೇಶವಾಗುವವರೆಗೆ ವಸತಿನಿಲಯಗಳನ್ನು ಬಂದ್ ಮಾಡಲಾಗಿದೆ ಎಂದು ಇಲಾಖೆ ಜಿಲ್ಲಾ ಅಧಿಕಾರಿ ಅಜ್ಜಪ್ಪ ಸೊಗಲದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *