ಚಿತ್ರದುರ್ಗ prajakiran.com : ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಮುರುಘಾಮಠದ ಶಿವಮೂರ್ತಿ ಶರಣರ ಬಂಧನದ ಬೆನ್ನಲ್ಲೇ ಎರಡನೇ ಆರೋಪಿ ಹಾಸ್ಟೆಲ್ ವಾರ್ಡನ್ ರಶ್ಮಿ ಅವರನ್ನು ಚಿತ್ರದುರ್ಗ ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ.
ನಿನ್ನೆ ಅವರನ್ನು ತೀವ್ರ ವಿಚಾರಣೆ ನಡೆಸಿದ ಬಳಿಕವೇ ಮುರುಘಾಮಠದ ಶಿವಮೂರ್ತಿ ಶರಣರನ್ನು ಬಂಧಿಸಿದ್ದರು.
ಎರಡನೇ ಆರೋಪಿಯಾಗಿರುವ ರಶ್ಮಿ ಮಕ್ಕಳಿಗೆ ಶ್ರೀಗಳು ಎಕಾಂತದಲ್ಲಿರುವಾಗ ಸೇವೆ ಮಾಡಲು ಕಳುಹಿಸುತ್ತಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು.
ಇದರಿಂದಾಗಿ ಈ ಪ್ರಕರಣದ ಐದು ಆರೋಪಿಗಳ ಪೈಕಿ ಇಬ್ಬರನ್ನು ಬಂಧಿಸಿದಂತಾಗಿದೆ.
ಇನ್ನುಳಿದಂತೆ ಮಠದ ಕಿರಿಯ ಶ್ರೀ ಬಸವಾದಿತ್ಯ, ವಕೀಲ ಗಂಗಾಧರಯ್ಯ ಹಾಗೂ ಪರಮಶಿವಯ್ಯ ಅವರು ಪ್ರಕರಣ ದಾಖಲಾದ ದಿನದಿಂದ ತಲೆ ಮರೆಸಿಕೊಂಡಿದ್ದಾರೆ.
ಅವರ ಬಂಧನಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಜಾಲ ಬೀಸಿದ್ದಾರೆ.