ಹುಬ್ಬಳ್ಳಿ prajakiran.com : ಮಹಾಮಾರಿ ಕರೊನಾ ಕಾಟ ಜನಪ್ರತಿನಿಧಿಗಳಿಗೂ ದಿನದಿಂದ ದಿನಕ್ಕೆ ವಿಸ್ತರಿಸುತ್ತಲೇ ಇದೆ. ಶುಕ್ರವಾರ ಹುಬ್ಬಳ್ಳಿ ಪೂರ್ವ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರಸಾದಅಬ್ಬಯ್ಯಗೂ ಕೊರೊನಾ ಸೋಂಕು ತಗುಲಿದೆ.
ನಿನ್ನೆ ಕೆಮ್ಮು, ನೆಗಡಿ ಕಾಣಿಸಿಕೊಂಡಿದ್ದರಿಂದ ಗುರುವಾರ ಹುಬ್ಭಳ್ಳಿಯ ಕಿಮ್ಸ್ ಗೆ ದಾಖಲಾಗಿದ್ದರು. ನಿನ್ನೆಯೇ ಶಾಸಕರ ಗಂಟಲ ದ್ರವ ಪರೀಕ್ಷೆ ಮಾಡಲಾಗಿತ್ತು.
ಇವತ್ತು ಅವರ ವರದಿ ಕೈ ಸೇರಿದ್ದು ಕರೋನಾ ಸೋಂಕು ಪಾಸಿಟಿವ್ ಇರುವದು ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ಶಾಸಕರನ್ನು ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ಶಾಸಕ ಪ್ರಸಾದಅಬ್ಬಯ್ಯಅವರಿಗೆ ಕರೋನಾ ಸೋಂಕು ದೃಢಪಟ್ಟಿದ್ದರಿಂದ ಅವರ ಕುಟುಂಬ ಸದಸ್ಯರು, ಕಾರು ಡ್ರೈವರ್, ಗನ್ ಮ್ಯಾನ್ ಹಾಗೂ ಆಪ್ತ ಕಾರ್ಯದರ್ಶಿಗಳ ಗಂಟಲು ದ್ರವ ಸಂಗ್ರಹ ಮಾಡಲಾಗಿದೆ.
ಅಲ್ಲದೆ, ಅವರ ಸಂಪರ್ಕದಲ್ಲಿ ಬಂದಿರುವವರನ್ನು ಹೋಂ ಕ್ವಾರಂಟೈನ್ ಗೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ.
ಈಗಾಗಲೇ ರಾಜ್ಯದಲ್ಲಿ ಕಾಂಗ್ರೆಸನ ಕುಣಿಗಲ್ ಶಾಸಕ ಡಾ. ರಂಗನಾಥ, ಸೇಡಂನ ಬಿಜೆಪಿ ಶಾಸಕ ರಾಜಕುಮಾರ್ ಪಾಟೀಲ ತೆಲ್ಕೂರ ಹಾಗೂ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ, ವಿಧಾನ ಪರಿಷತ್ ಸದಸ್ಯರಾದ ಪ್ರಾಣೇಶ ಹಾಗೂ ಭೋಜೇಗೌಡರಿಗೆ ಮತ್ತು ಮಂಡ್ಯ ಸಂಸದೆ ಸುಮಲತಾ ಅಂಬರೀಶ ಅವರಿಗೆ ಕರೋನಾ ದೃಢವಾಗಿದ್ದರಿಂದ ನಿಯೋಜಿತ ಕೋವಿಡ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವುದು ಗಮನಿಸಬಹುದಾಗಿದೆ.