ಹುಬ್ಬಳ್ಳಿ-ಧಾರವಾಡ prajakiran.com : ಧಾರವಾಡ ಜಿಲ್ಲೆಯ ಪೊಲೀಸ್ ಇಲಾಖೆ ಹಾಗೂ ಹುಬ್ಬಳ್ಳಿ-ಧಾರವಾಡ ಪೊಲೀಸರನ್ನು ಬೆಂಬಿಡದೆ ಕಾಡುತ್ತಿರುವ ಮಹಾಮಾರಿ ಕರೋನಾ ಇದೀಗ ಹುಬ್ಬಳ್ಳಿ-ಧಾರವಾಡ ಮಹಾನಗರದ ಎರಡು ಡಿಸಿಪಿ ಕಚೇರಿಗಳನ್ನು ತಲುಪಿದೆ.
ಹುಬ್ಭಳ್ಳಿ-ಧಾರವಾಡ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿಕಚೇರಿಯ ಸಿಬ್ಬಂದಿಯೊಬ್ಬರಿಗೆ ಸೋಂಕು ವಕ್ಕರಿಸಿರುವುದರಿಂದ ಕಚೇರಿ ಸೀಲ್ ಡೌನ್ ಮಾಡಲಾಗಿದೆ. ಅಲ್ಲದೆ, ಡಿಸಿಪಿ ಕೃಷ್ಣಕಾಂತ್ ಅವರು ಹೋಂ ಕ್ವಾರಂಟಿನ್ ಗೆ ಒಳಗಾಗಿದ್ದಾರೆ.
ಅದೇ ರೀತಿ ಸಂಚಾರ ಮತ್ತು ಅಪರಾಧ ಡಿಸಿಪಿ ಕಚೇರಿಯ ಒಬ್ಬ ಸಿಬ್ಬಂದಿಗೆ ಕೂಡ ಸೋಂಕು ಕಾಣಿಸಿಕೊಂಡಿರುವ ಮಾಹಿತಿ ಇರುವುದರಿಂದ ಆ ಕಚೇರಿಯನ್ನು ಕೂಡ ಮುಂಜಾಗ್ರತ ಕ್ರಮವಾಗಿ ಸೀಲ್ ಡೌನ್ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಈಗಾಗಲೇ ಹುಬ್ಬಳ್ಳಿ-ಧಾರವಾಡದ ಉಪನಗರ ಪೊಲೀಸ್ ಠಾಣೆ, ವಿದ್ಯಾನಗರ ಪೊಲೀಸ್ ಠಾಣೆ, ಕಸಬಾ ಪೇಟೆ, ಮಹಿಳಾ ಪೊಲೀಸ್ ಠಾಣೆ, ಶಹರ ಪೊಲೀಸ್ ಠಾಣೆ, ಪೊಲೀಸ್ ಆಯುಕ್ತರ ಕಚೇರಿ ಸೇರಿ 50ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಕರೋನಾ ಸೋಂಕಿಗೆ ಒಳಗಾಗಿದ್ದಾರು.
ಇದರಲ್ಲಿ ಅನೇಕರು ಈಗಾಗಲೇ ಗುಣಮುಖರಾಗಿ ಮತ್ತೇ ಕರ್ತವ್ಯಕ್ಕೆ ಮರಳಿದ್ದಾರೆ. ಇನ್ನೂ ಕೆಲವರು ಚೇತರಿಸಿಕೊಳ್ಳುತ್ತಿದ್ದಾರೆ.
ಅಲ್ಲದೆ, ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಠಾಣೆಯ ಎ ಎಸ್ ಇ ಒಬ್ಬರು ಕರೋನಾದಿಂದ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದರು.
ಅದೇ ರೀತಿ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಸಹಾಯಕ ಸಬ್ ಇನ್ಸಪೆಕ್ಟರ್ ಕೂಡ ಮೃತಪಟ್ಟಿದ್ದನ್ನು ಇಲ್ಲಿ ಸ್ಮರಿಸಬಹದು.