ಅಪರಾಧ

ಧಾರವಾಡದ ಮದಿಹಾಳದಲ್ಲಿ ಹುಂಡಿ ಹಣ ಕದ್ದ ಕಳ್ಳರು….!

ಧಾರವಾಡ prajakiran.com : ಕಳ್ಳರು ತಮ್ಮ ಕೈಚಳಕ ತೋರಿಸಿ ದೇವಸ್ಥಾನದ ಹುಂಡಿಯಲ್ಲಿದ್ದ ಲಕ್ಷಾಂತರ ನಗದು ಎಗರಿಸಿ ಖಾಲಿ ಹುಂಡಿಯನ್ನು ಹೊರವಲಯದಲ್ಲಿ ಎಸೆದು ಹೋಗಿರುವ ಘಟನೆ ಧಾರವಾಡದ ಮದಿಹಾಳದಲ್ಲಿ ನಡೆದಿದೆ.

ಮದಿಹಾಳ ಬಡಾವಣೆಯಲ್ಲಿರುವ ವಿಠ್ಠಲ ದೇವಸ್ಥಾನದಲ್ಲಿಯೇ ಈ ಘಟನೆ ನಡೆದಿದೆ.

ದೇವರ ಹುಂಡಿಯಲ್ಲಿದ್ದ ಹಣ ಕದ್ದು ಹುಂಡಿಯನ್ನು ಊರಾಚೆ ಬಿಸಾಕಿ ಹೋಗಿದ್ದಾರೆ.

ನಿನ್ನೆ ತಡರಾತ್ರಿ ಕಳ್ಳರು ದೇವಸ್ಥಾನದ ಹುಂಡಿಯನ್ನೇ ಕದ್ದೊಯ್ದು ಅದರಲ್ಲಿ ನಗದು ತೆಗೆದುಕೊಂಡು ಖಾಲಿ ಹುಂಡಿಯನ್ನು ಮದಿಹಾಳದ ಹೊರವಲಯದಲ್ಲಿ ಎಸೆದು ಹೋಗಿದ್ದಾರೆ.

ವಿಷಯ ಗೊತ್ತಾದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಧಾರವಾಡ ಶಹರ ಠಾಣೆ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ಕಳ್ಳರ ಬಂಧನಕ್ಕೆ ಜಾಲ ಬೀಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *