ಹುಬ್ಬಳ್ಳಿ ಪ್ರಜಾಕಿರಣ.ಕಾಮ್ : ಬೆಳಗಾವಿಯ ಚಿಕ್ಕೋಡಿಯಲ್ಲಿ ಜೈನಮುನಿಗಳ ಬರ್ಬರ ಹತ್ಯೆಯನ್ನು ಖಂಡಿಸಿ, ವರೂರು ನವಗ್ರಹ ತೀರ್ಥಂಕರ ಜೈನಕ್ಷೇತ್ರದ ಜೈನಮುನಿ ಗುಣಧರನಂದಿ ಮಹಾರಾಜ್ ಸ್ವಾಮೀಜಿಗಳು ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ.
ಸರಕಾರ ಈ ಕೂಡಲೇ ಹತ್ಯಾ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ನೀಡುವಂತೆ ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾಋ.
ಸಾವಿರಾರು ಮಕ್ಕಳಿಗೆ ವಿದ್ಯಾದಾನ ಮಾಡುತ್ತಿರುವ ಸ್ವಾಮಿಗಳು ಸಮಾಜಕ್ಕೆ ಬೇಕಾದ ಮಹಾನ್ ಚೇತನವಾಗಿದ್ದಾರೆ ಸ್ವಾಮಿಗಳ ಆರೋಗ್ಯ, ಜೀವನ ನಮಗೆಲ್ಲರಿಗೂ ಮಾದರಿಯಾಗಿದ್ದು, ಉಪವಾಸ ಸತ್ಯಾಗ್ರಹವನ್ನು ಕೈಬಿಡುವಂತೆ ಸ್ವಾಮಿಗಳಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮನವಿ ಮಾಡಿದ್ದಾರೆ
ಅಹಿಂಸಾ ಸತ್ಯ ಮಾರ್ಗದಲ್ಲಿ ಬದುಕು ಸಾಗಿಸುವ ಜೈನಮುನಿಗಳ ರಕ್ಷಣೆಗೆ ಸರಕಾರ ಈ ಕೂಡಲೇ ಕ್ರಮ ಕೈಗೊಳ್ಳಬೇಕು ಹಾಗೂ ಜೈನಮುನಿಗಳ ಕೊಲೆ ಪ್ರಕರಣದ ಸಿಬಿಐ ತನಿಖೆ ಗೆ ವಹಿಸಲು ಆಗ್ರಹಿಸಿದರು.