ಹುಬ್ಬಳ್ಳಿ prajakiran.com : ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ತನ್ನ ಪತ್ನಿಯನ್ನು ಪತಿಯೇ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ದೇವರಗುಡಿಹಾಳ ಹೊರವಲಯದಲ್ಲಿ ಶನಿವಾರ ನಡೆದಿದೆ.
ದೇವರಗುಡಿಹಾಳ ಗ್ರಾಮದ ವಿದ್ಯಾ ಕೇಶಪ್ಪನವರ ಕೊಲೆಯಾದ ಮಹಿಳೆಯಾಗಿದ್ದಾಳೆ.
ಔಷಧಿ ಕೊಡಿಸುವುದಾಗಿ ಹೇಳಿ ಗ್ರಾಮದ ಹೊರವಲಯಕ್ಕೆ ಕರೆದುಕೊಂಡು ಹೋಗಿದ್ದ ಪತಿ ನಿಂಗಪ್ಪ ಕೇಶಪ್ಪನವರ, ಪತ್ನಿ ವಿದ್ಯಾಳನ್ನು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಪ್ರಕರಣ ಸಂಬಂಧ ಆರೋಪಿ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.