ಧಾರವಾಡ prajakiran. com : ಅಧ್ಯಯನದ ಪ್ರಗತಿ ಸಾಧಿಸುವ ಮೂಲಕ ವಿದ್ಯಾರ್ಥಿ ಸಮೂಹ ದೇಶದ ಪ್ರಗತಿಯಲ್ಲಿ ಭಾಗಿಯಾಗಬೇಕು ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಕರೆ ನೀಡಿದರು.
ಧಾರವಾಡ ಸತ್ತೂರು ಬಳಿಯ ಐಐಐಟಿ ಕ್ಯಾಂಪಸ್ ಉದ್ಘಾಟನೆ ಮಾಡಿದ ನಂತರ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು ದೇಶದ ಪ್ರಗತಿ ಇಂದಿನ ಯುವ ಸಮುದಾಯದ ಕೈಯಲ್ಲಿದೆ.
ವಿಜ್ಞಾನ ತಂತ್ರಜ್ಞಾನದಲ್ಲಿ ಪ್ರಗತಿ ಸಾಧಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಸಂಶೋಧನೆ ಬಹಳಷ್ಟು ಪ್ರಾಮುಖ್ಯತೆ ಪಡೆದಿದೆ ಎಂದು ತಿಳಿಸಿದರು.
ಐಐಐಟಿ ದೇಶಕ್ಕೆ ಮುಂಬರುವ ದಿನಗಳಲ್ಲಿ ಇನ್ನಷ್ಟು ಬಲ ತುಂಬುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಬೇಕು ಎಂಬ ಮಹದಾಸೆಯಿಂದ ಈ ಕ್ಯಾಂಪಸ್ ಉದ್ಘಾಟನೆ ಮಾಡುತ್ತಿದ್ದೇನೆ.
ಪ್ರಧಾನಿ ನರೇಂದ್ರ ಮೋದಿ ಅವರು ಈ ಕಟ್ಟಡದ ಶಿಲಾನ್ಯಾಸ ನೆರವೇರಿಸಿದರು. ಇದೀಗ ಉದ್ಘಾಟನೆ ಮಾಡಲಾಗಿದೆ.
ಇದು ಮುಂಬರುವ ದಿನಗಳಲ್ಲಿ ದೇಶದ ನಂಬರ್ ಒನ್ ಐಐಐಟಿ ಕೇಂದ್ರವಾಗಿ ಮಾರ್ಪಡಿಸುವುದು ವಿದ್ಯಾರ್ಥಿಗಳ ಮೇಲಿದೆ ಎಂದು ತಿಳಿಸಿದರು.
ವಿದ್ಯಾರ್ಥಿಗಳು ದೇಶಕ್ಕಾಗಿ ಏನಾದರೂ ಕೊಡುಗೆ ನೀಡಬೇಕು ಎಂಬ ದೃಷ್ಟಿಯಿಂದ ವಿಜ್ಞಾನ ಹಾಗೂ ತಂತ್ರಜ್ಞಾನದಲ್ಲಿ ಪ್ರಗತಿ ಸಾಧಿಸುವ ನಿಟ್ಟಿನಲ್ಲಿ ಈ ಕೇಂದ್ರ ಸಾಧನೆಗೈಯಲ್ಲಿ ಎಂದು ಹಾರೈಸುತ್ತೇನೆ ಎಂದು ತಿಳಿಸಿದರು.
ರಾಜ್ಯಪಾಲ ಥಾವರಚಂದ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಐಐಐಟಿ ಮುಖ್ಯಸ್ಥೆಯಾದ ಸುಧಾಮೂರ್ತಿ ವೇದಿಕೆಯಲ್ಲಿದ್ದರು.